ಚಿತ್ರ ಮಂಜರಿ

ಚಾಂಡ್ಲರ್ ಎಂದೇ ಖ್ಯಾತರಾಗಿದ್ದ ನಟ ಮ್ಯಾಥ್ಯೂ ಪೆರ್ರಿ ನಿಧನ

ಲಾಸ್ ಏಂಜಲೀಸ್ : ಭಾರಿ ಜನಪ್ರಿಯ ಟಿವಿ ಶೋ ‘ಫ್ರೆಂಡ್ಸ್’ನ ಖ್ಯಾತ ನಟ ಮ್ಯಾ‍ಥ್ಯೂ ಪೆರ್ರಿ ಶನಿವಾರ ತಮ್ಮ ನಿವಾಸದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಮೆರಿಕಾ ಮಾಧ್ಯಮಗಳು ವರದಿ ಮಾಡಿವೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಪೆರ್ರಿ ತಮ್ಮ ನಿವಾಸದಲ್ಲಿನ ಬಾತ್ ಟಬ್ ನಲ್ಲಿ ಪ್ರಜ್ಞಾನಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ವರದಿಯಾಗಿದೆ.

“ನಾವು ಈ ಕುರಿತ ಕರೆಗೆ ಸಂಜೆ 4.30 ಗಂಟೆಗೆ ಸ್ಪಂದಿಸಿದೆವು. ಇದು 50 ವರ್ಷ ವಯಸ್ಸಿನ ಪುರುಷರೊಬ್ಬರ ಕುರಿತ ಸಾವಿನ ತನಿಖೆಯಾಗಿದೆ” ಎಂದು ಸಂತ್ರಸ್ತ ವ್ಯಕ್ತಿಯ ಹೆಸರನ್ನು ದೃಢಪಡಿಸದೆ ಲಾಸ್ ಏಂಜಲೀಸ್ ಪೊಲೀಸ್ ಇಲಾಖೆಯ ವಕ್ತಾರರು AFP ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

‘ಕೊಳ, ಸ್ಪಾ, ಸ್ನಾನದ ಟಬ್ ಅಥವಾ ಕಾರಂಜಿ’ಯನ್ನು ಉಲ್ಲೇಖಿಸಿ ಹೇಳಲಾಗುವ ತುರ್ತು ಜಲ ಅವಘಡ ಕರೆಗೆ ನಾವು ಸ್ಪಂದಿಸಿದೆವು ಎಂದು ಅಗ್ನಿಶಾಮಕ ಇಲಾಖೆಯ ವಕ್ತಾರರೊಬ್ಬರು ದೃಢಪಡಿಸಿದ್ದರೂ, ಪೆರ್ರಿ ನೀರಿನಲ್ಲಿ ಮುಳುಗಿದ್ದಾರೆ ಎಂಬ ಸುದ್ದಿಯನ್ನು ಅವರೂ ದೃಢಪಡಿಸಿಲ್ಲ.

1994-2004ರವರೆಗೆ 10 ಋತುವಿನಲ್ಲಿ ಪ್ರಸಾರವಾದ ಜನಪ್ರಿಯ ‘ಫ್ರೆಂಡ್ಸ್’ ಟಿವಿ ಶೋನಲ್ಲಿ ಚಾಂಡ್ಲರ್ ಬಿಂಗ್ ಪಾತ್ರ ನಿರ್ವಹಿಸುವ ಮೂಲಕ ಪೆರ್ರಿ ಖ್ಯಾತರಾಗಿದ್ದರು.

ಅವರು ಕೊನೆಯವರೆಗೂ ಅವಿವಾಹಿತರಾಗಿಯೇ ಉಳಿದಿದ್ದರು.

ಪೆರ್ರಿ ಸಂಬಂಧಿಕರು ಈ ಕುರಿತು ತಕ್ಷಣವೇ ಪ್ರತಿಕ್ರಿಯೆಗೆ ದೊರೆತಿಲ್ಲ ಎಂದು AFP ಸುದ್ದಿ ಸಂಸ್ಥೆ ವರದಿ ಮಾಡಿದೆ.

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

23 mins ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

31 mins ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

38 mins ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

1 hour ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

1 hour ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

1 hour ago