ಚಿತ್ರ ಮಂಜರಿ

ನಟ ಪ್ರೇಮ್‌ – ಡಿಕೆಶಿ ದಿಢೀರ್‌ ಭೇಟಿ; ಕಾಂಗ್ರೆಸ್‌ ಸೇರ್ತಾರಾ ನಟ?

ಸಿನಿಮಾ ನಟರು ಹಾಗೂ ನಟಿಯರು ಚಿತ್ರರಂಗದಲ್ಲಿ ಹೆಸರು ಮಾಡಿದ ಬಳಿಕ ರಾಜಕೀಯ ಕ್ಷೇತ್ರಕ್ಕೆ ಕಾಲಿಡುವುದು ಹಳೆಯ ವಾಡಿಕೆ. ಈ ಹಿಂದೆ ಕನ್ನಡ ಸೇರಿದಂತೆ ಇತರೆ ಭಾಷೆಗಳ ಕಲಾವಿದರು ರಾಜಕೀಯ ಸೇರಿದ ಹಲವಾರು ನಿದರ್ಶನಗಳಿವೆ. ಅಲ್ಲದೇ ಸಿನಿಮಾ ನಟ – ನಟಿಯರು ಮುಖ್ಯಮಂತ್ರಿಗಳಾಗಿ ಯಶಸ್ವಿ ರಾಜ್ಯಭಾರ ನಡೆಸಿದ್ದನ್ನು ನಾವು ನೀವೆಲ್ಲಾ ಕಂಡಿದ್ದೇವೆ.

ಇಂತಹ ಕಲಾವಿದರ ಸಾಲಿಗೆ ಇದೀಗ ಕನ್ನಡದ ಖ್ಯಾತ ನಟರಲ್ಲಿ ಓರ್ವರಾದ ನೆನಪಿರಲಿ ಪ್ರೇಮ್‌ ಸಹ ಸೇರ್ಪಡೆಗೊಳ್ತಾರಾ ಎಂಬ ಪ್ರಶ್ನೆ ಏಳುವಂತೆ ಮಾಡಿದೆ ಅವರು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ ಸುದ್ದಿ.

ಹೌದು, ನಟ ಪ್ರೇಮ್‌ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡುತ್ತಿರುವ ಫೋಟೊವನ್ನು ಸ್ವತಃ ಡಿಕೆಶಿ ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಿನ್ನೆ ( ನವೆಂಬರ್‌ 12 ) ಈ ಫೋಟೊ ಹಂಚಿಕೊಂಡಿರುವ ಡಿಕೆ ಶಿವಕುಮಾರ್‌ “ಖ್ಯಾತ ಚಿತ್ರನಟರಾದ ನೆನಪಿರಲಿ ಪ್ರೇಮ್ ರವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ, ಶುಭ ಹಾರೈಸಿದರು” ಎಂದು ಬರೆದುಕೊಂಡಿದ್ದಾರೆ.

ಈ ಫೋಟೊ ಕಂಡ ನೆಟ್ಟಿಗರು ಪ್ರೇಮ್‌ ಏನಾದ್ರೂ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಳ್ತಾರಾ ಎಂಬ ಪ್ರಶ್ನೆಯನ್ನು ಕಾಮೆಂಟ್‌ ಮಾಡುವ ಮೂಲಕ ಎಸೆದಿದ್ದಾರೆ. ಇನ್ನು ಪ್ರೇಮ್‌ ಡಿಕೆ ಶಿವಕುಮಾರ್‌ ಅವರು ಮಾಡಿರುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ ಅನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ದೀಪಾವಳಿಯ ಶುಭಾಶಯಗಳು ಸರ್‌ ಎಂದು ಬರೆದುಕೊಳ್ಳುವ ಮೂಲಕ ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

ಇನ್ನು ಪ್ರೇಮ್‌ ಸದ್ಯ ಕೆಲ ಚಿತ್ರಗಳಲಿ ಬ್ಯುಸಿ ಇದ್ದು, ಪ್ರೇಮ್‌ ಪುತ್ರ ಹಾಗೂ ಪುತ್ರಿಯೂ ಸಹ ಬೆಳ್ಳಿತೆರೆ ಪ್ರವೇಶಿಸಿದ್ದಾರೆ. ಈ ಹಿಂದೆ ಪ್ರೇಮ್‌ ಕಾವೇರಿ ನೀರು ಹಂಚಿಕೆ ವಿವಾದದ ವಿಚಾರವಾಗಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಸುದ್ದಿಯಾಗಿದ್ದರು.

andolana

Recent Posts

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

1 min ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

3 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

3 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

6 hours ago