ಚಿತ್ರ ಮಂಜರಿ

ಪುಣೆ ಎಫ್‌ಟಿಐಐ ಅಧ್ಯಕ್ಷರಾಗಿ ನಟ ಆರ್ ಮಾಧವನ್

ನವದೆಹಲಿ : ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್‌ಟಿಐಐ) ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್‌ಮನ್‌ ಆಗಿ ನಟ ಆರ್ ಮಾಧವನ್ ಅವರು ನಾಮನಿರ್ದೇಶನಗೊಂಡಿದ್ದಾರೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ಮಾಹಿತಿಯನ್ನು ಘೋಷಿಸಿದ್ದು, ಮಾಧವನ್‌ ಅವರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

“ಎಫ್‌ಟಿಐಐ ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್‌ಮನ್‌ ಆಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ಮಾಧವನ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಮತ್ತು ನೈತಿಕತೆಯು ಈ ಸಂಸ್ಥೆಯನ್ನು ಇನ್ನಷ್ಟು ಉತ್ಕೃಷ್ಟಗೊಳಿಸಿ, ಧನಾತ್ಮಕ ಬದಲಾವಣೆಗಳನ್ನು ತರುತ್ತದೆ ಮತ್ತು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ನನಗೆ ಖಾತ್ರಿಯಿದೆ. ನಿಮಗೆ ನನ್ನ ಶುಭಾಶಯಗಳು” ಎಂದು‌ ಸಚಿವ ಅನುರಾಗ್ ಠಾಕೂರ್ ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟ ಮಾಧವನ್‌, “ಎಲ್ಲಾ ನಿರೀಕ್ಷೆಗಳನ್ನು ಪೂರೈಸಲು ನಾನು ನನ್ನ ಕೈಲಾದಷ್ಟು ಮಾಡುತ್ತೇನೆ” ಎಂದು ಅನುರಾಗ್‌ ಠಾಕೂರ್‌ ಅವರನ್ನು ಉಲ್ಲೇಖಿಸಿ ಧನ್ಯವಾದವನ್ನು ತಿಳಿಸಿದ್ದಾರೆ.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago