ನವದೆಹಲಿ : ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್ಟಿಐಐ) ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್ಮನ್ ಆಗಿ ನಟ ಆರ್ ಮಾಧವನ್ ಅವರು ನಾಮನಿರ್ದೇಶನಗೊಂಡಿದ್ದಾರೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ಮಾಹಿತಿಯನ್ನು ಘೋಷಿಸಿದ್ದು, ಮಾಧವನ್ ಅವರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
“ಎಫ್ಟಿಐಐ ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್ಮನ್ ಆಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ಮಾಧವನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಮತ್ತು ನೈತಿಕತೆಯು ಈ ಸಂಸ್ಥೆಯನ್ನು ಇನ್ನಷ್ಟು ಉತ್ಕೃಷ್ಟಗೊಳಿಸಿ, ಧನಾತ್ಮಕ ಬದಲಾವಣೆಗಳನ್ನು ತರುತ್ತದೆ ಮತ್ತು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ನನಗೆ ಖಾತ್ರಿಯಿದೆ. ನಿಮಗೆ ನನ್ನ ಶುಭಾಶಯಗಳು” ಎಂದು ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ನಟ ಮಾಧವನ್, “ಎಲ್ಲಾ ನಿರೀಕ್ಷೆಗಳನ್ನು ಪೂರೈಸಲು ನಾನು ನನ್ನ ಕೈಲಾದಷ್ಟು ಮಾಡುತ್ತೇನೆ” ಎಂದು ಅನುರಾಗ್ ಠಾಕೂರ್ ಅವರನ್ನು ಉಲ್ಲೇಖಿಸಿ ಧನ್ಯವಾದವನ್ನು ತಿಳಿಸಿದ್ದಾರೆ.
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…