ಚಿತ್ರ ಮಂಜರಿ

ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದ ನಟಿ ರಮ್ಯಾ

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಮ್ಯಾ ಅವರು ನೆನ್ನೆ ದಿನ ಟ್ವೀಟ್ ಮಾಡಿದ್ದ ವಿಷಯವನ್ನು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಕೆರಳಿಸಿತ್ತು. ನೆನ್ನೆ ದಿನ ನಟಿ ರಮ್ಯಾ ಅವರು ಟ್ವೀಟ್ ಮಾಡುವ ಮೂಲಕ ಗಣೇಶ ಹಬ್ಬದಂದು ಬೆಳಿಗ್ಗೆ 11 ಗಂಟೆಗೆ  ಶುಭ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದಿದ್ದರು. ಅದರಂತೆ ಇಂದು ಬೆಳಿಗ್ಗೆ ನಟಿ ರಮ್ಯಾ ಅವರು ಶುಭ ಸುದ್ದಿ ಒಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ.

ಹೌದು ನಟಿ ರಮ್ಯಾ ಅವರು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಟಿ ರಮ್ಯಾ ಅವರು ನಿರ್ಮಾಪಕಿಯಾಗಲಿದ್ದಾರೆ. ಈ ವಿಚಾರವನ್ನು ಸ್ವತಃ ರಮ್ಯಾ ಅವರು ಹಂಚಿಕೊಂಡಿದ್ದು.

ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು ನಾನು ಮತ್ತೆ ಚಿತ್ತಾರಂಗಕ್ಕೆ ಹಿಂತಿರುಗುತ್ತಿದ್ದೇನೆ ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದಿದ್ದಾರೆ.

ಏನಿದು ಆಪಲ್ ಬಾಕ್ಸ್ ?

ಇದೊಂದು ಅಸಾಧಾರಣವಾದ ಆದರೆ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನಟಿ ರಮ್ಯಾ ಅವರ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗೆ ಇದ್ದಿತಂತೆ. ಸೆಟ್ನಲ್ಲಿ ಕೂರಲು ಕುರ್ಚಿಗಳಿಲ್ಲದೆ ಇದ್ದಾಗ ಅಥವಾ ಕ್ಯಾಮರಾದ ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಆಪಲ್ ಬಾಕ್ಸ್ ರಮ್ಯಾ ಅವರಿಗೆ ನೆರವಿಗೆ ಬರುತ್ತಿತ್ತಂತೆ. ಆಪಲ್ ಬಾಕ್ಸ್ ಎಂಬ ಸರಳತೆಯ ಪೆಟ್ಟಿಗೆ ಸದಾ ನನಗೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿದೆ ಎಂದು ನಟಿ ರಮ್ಯಾ ಅವರು ಹೇಳಿದ್ದಾರೆ.

ಸದ್ಯ ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದ್ದು ನನಗೆ ಬಹಳ ಸಂತೋಷವಿದೆ ಈ ಎರಡು ಚಿತ್ರಗಳು ಕೆಆರ್ ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಅದರ ಜೊತೆಯಲ್ಲಿ ಓ ಟಿ ಟಿ ಫ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗೂ ವೆಬ್ ಸೀರಿಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟುಡಿಯೋ ಸಿದ್ಧವಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್ ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ ಎಂದು ನಟಿ ರಮ್ಯಾ ಅವರು ಬರೆದುಕೊಂಡಿದ್ದಾರೆ.

ಮುಂದುವರೆದ ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು ಸಿನಿಮಾ ವರ್ಗದವರು ಮತ್ತು ಎಲ್ಲದಕ್ಕಿಂತ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃದಯಪೂರ್ವಕ ವಂದನೆಗಳು ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಬೆಲೆ ಕಟ್ಟಲಾಗದು. ಇದರ ಜೊತೆಗೆ ವಿಜಯ ಕಿರಗಂದೂರು ಜಯಣ್ಣ ಯೋಗಿ ಜೀ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು. ಹೊಸ ಆರಂಭದತ್ತ ಹೆಜ್ಜೆ ಇಡುತ್ತ ಕೃತಜ್ಞತೆಗಳೊಂದಿಗೆ ಎಂದು ರಮ್ಯಾ ಬರೆದುಕೊಳ್ಳುವ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ತೆರೆ ಇಳಿದಿದ್ದಾರೆ.

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

2 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

2 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

4 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

4 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

6 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

8 hours ago