ಚಿತ್ರ ಮಂಜರಿ

ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದ ನಟಿ ರಮ್ಯಾ

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಮ್ಯಾ ಅವರು ನೆನ್ನೆ ದಿನ ಟ್ವೀಟ್ ಮಾಡಿದ್ದ ವಿಷಯವನ್ನು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಕೆರಳಿಸಿತ್ತು. ನೆನ್ನೆ ದಿನ ನಟಿ ರಮ್ಯಾ ಅವರು ಟ್ವೀಟ್ ಮಾಡುವ ಮೂಲಕ ಗಣೇಶ ಹಬ್ಬದಂದು ಬೆಳಿಗ್ಗೆ 11 ಗಂಟೆಗೆ  ಶುಭ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದಿದ್ದರು. ಅದರಂತೆ ಇಂದು ಬೆಳಿಗ್ಗೆ ನಟಿ ರಮ್ಯಾ ಅವರು ಶುಭ ಸುದ್ದಿ ಒಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ.

ಹೌದು ನಟಿ ರಮ್ಯಾ ಅವರು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಟಿ ರಮ್ಯಾ ಅವರು ನಿರ್ಮಾಪಕಿಯಾಗಲಿದ್ದಾರೆ. ಈ ವಿಚಾರವನ್ನು ಸ್ವತಃ ರಮ್ಯಾ ಅವರು ಹಂಚಿಕೊಂಡಿದ್ದು.

ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು ನಾನು ಮತ್ತೆ ಚಿತ್ತಾರಂಗಕ್ಕೆ ಹಿಂತಿರುಗುತ್ತಿದ್ದೇನೆ ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದಿದ್ದಾರೆ.

ಏನಿದು ಆಪಲ್ ಬಾಕ್ಸ್ ?

ಇದೊಂದು ಅಸಾಧಾರಣವಾದ ಆದರೆ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನಟಿ ರಮ್ಯಾ ಅವರ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗೆ ಇದ್ದಿತಂತೆ. ಸೆಟ್ನಲ್ಲಿ ಕೂರಲು ಕುರ್ಚಿಗಳಿಲ್ಲದೆ ಇದ್ದಾಗ ಅಥವಾ ಕ್ಯಾಮರಾದ ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಆಪಲ್ ಬಾಕ್ಸ್ ರಮ್ಯಾ ಅವರಿಗೆ ನೆರವಿಗೆ ಬರುತ್ತಿತ್ತಂತೆ. ಆಪಲ್ ಬಾಕ್ಸ್ ಎಂಬ ಸರಳತೆಯ ಪೆಟ್ಟಿಗೆ ಸದಾ ನನಗೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿದೆ ಎಂದು ನಟಿ ರಮ್ಯಾ ಅವರು ಹೇಳಿದ್ದಾರೆ.

ಸದ್ಯ ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದ್ದು ನನಗೆ ಬಹಳ ಸಂತೋಷವಿದೆ ಈ ಎರಡು ಚಿತ್ರಗಳು ಕೆಆರ್ ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಅದರ ಜೊತೆಯಲ್ಲಿ ಓ ಟಿ ಟಿ ಫ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗೂ ವೆಬ್ ಸೀರಿಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟುಡಿಯೋ ಸಿದ್ಧವಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್ ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ ಎಂದು ನಟಿ ರಮ್ಯಾ ಅವರು ಬರೆದುಕೊಂಡಿದ್ದಾರೆ.

ಮುಂದುವರೆದ ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು ಸಿನಿಮಾ ವರ್ಗದವರು ಮತ್ತು ಎಲ್ಲದಕ್ಕಿಂತ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃದಯಪೂರ್ವಕ ವಂದನೆಗಳು ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಬೆಲೆ ಕಟ್ಟಲಾಗದು. ಇದರ ಜೊತೆಗೆ ವಿಜಯ ಕಿರಗಂದೂರು ಜಯಣ್ಣ ಯೋಗಿ ಜೀ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು. ಹೊಸ ಆರಂಭದತ್ತ ಹೆಜ್ಜೆ ಇಡುತ್ತ ಕೃತಜ್ಞತೆಗಳೊಂದಿಗೆ ಎಂದು ರಮ್ಯಾ ಬರೆದುಕೊಳ್ಳುವ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ತೆರೆ ಇಳಿದಿದ್ದಾರೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

7 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago