ಚಿತ್ರ ಮಂಜರಿ

ನಟ ರವಿ ಕಿಶನ್ ಪುತ್ರಿ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರ್ಪಡೆ

ನವದೆಹಲಿ: ದಕ್ಷಿಣ ಭಾರತದ ಖ್ಯಾತ ನಟ, ‘ಹೆಬ್ಬುಲಿ’ ಚಿತ್ರದ ವಿಲನ್ ಖ್ಯಾತಿಯ ನಟ ರವಿ ಕಿಶನ್ ಪುತ್ರಿ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆ ಸೇರಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿ ಮಕ್ಕಳು ಚಿತ್ರರಂಗದಲ್ಲೇ ಮುಂದುವರೆಯಲು ಇಷ್ಟಪಡುತ್ತಾರೆ. ಪಾಲಕರ ಹೆಸರಲ್ಲಿ ಸಿನಿಮಾ ರಂಗಕ್ಕೆ ಬಂದು ಒಂದಷ್ಟು ಸಿನಿಮಾ ಮಾಡುತ್ತಾರೆ. ಆದರೆ ಇದಕ್ಕೆ ತದ್ವಿರುದ್ದ ಎಂಬಂತೆ ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ ಮೂಲಕ ನಟ ರವಿ ಕಿಶನ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಈಗ ಅವರ ಮಗಳು ಸೇನೆ ಸೇರಿದ್ದಾರೆ.

ನಟ, ಸಂಸದ ರವಿ ಕಿಶನ್ ಮಗಳು ಇಶಿತಾ ಶುಕ್ಲಾ ಭಾರತೀಯ ಸೇನೆ ಸೇರಿದ್ದಾರೆ. ಈ ಮೂಲಕ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ರವಿ ಕಿಶನ್ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ‘ದೇಶ ಸೇವೆ ಮಾಡುವ ಅವಕಾಶ ಇಶಿತಾಗೆ ಸಿಕ್ಕಿದೆ. ತಮ್ಮ ಪುತ್ರಿಯ ಸಾಧನೆ ಬಗ್ಗೆ ತಮಗೆ ಅತೀವ ಹೆಮ್ಮೆ ಇದೆ.. ಆಕೆಯ ಭವಿಷ್ಯ ಉಜ್ವಲವಾಗಿರಲಿ ಎಂದು ರವಿ ಕಿಶನ್ ಆಶಿಸಿದ್ದಾರೆ.

ಅಂದಹಾಗೆ ರವಿ ಕಿಶನ್ ಪುತ್ರಿ ಇಶಿತಾಗೆ ಈಗ ಕೇವಲ 21 ವರ್ಷ. 1993ರಲ್ಲಿ ಪ್ರೀತಿ ಎಂಬುವರ ಜೊತೆ ರವಿ ಕಿಶನ್ ಮದುವೆಯಾದರು. ಒಬ್ಬ ಮಗ ಮತ್ತು ಮೂರು ಜನ ಹೆಣ್ಣು ಮಕ್ಕಳಿದ್ದಾರೆ. ಅದರಲ್ಲಿ ರಿವಾ ಕಿಶನ್ ಶುಕ್ಲಾ ಎಂಬ ಪುತ್ರಿ 2020ರಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ‘ಸಬ್ ಕುಶಲ್ ಮಂಗಲ್’ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನು ಎಲ್ಲರೂ ಇಶಿತಾ ಹಾಗೂ ರವಿ ಕಿಶನ್​ಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ವಿಚಾರದಲ್ಲಿ ಕುಟುಂಬ ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ಎಂದು ಅನೇಕರು ಹೇಳಿದ್ದಾರೆ

ಬಾಲಿವುಡ್ ನಟ ರವಿ ಕಿಶನ್ ಅವರು ಕನ್ನಡದ ‘ಹೆಬ್ಬುಲಿ’ ಚಿತ್ರದಲ್ಲಿ ಸುದೀಪ್ ಮುಂದೆ ಅಬ್ಬರಿಸಿ ಗಮನ ಸೆಳೆದಿದ್ದರು. ದ್ರೋಣ, ಶಿವಾರ್ಜುನ, ರಾಬರ್ಟ್ ಚಿತ್ರದಲ್ಲಿಯೂ ರವಿ ಕಿಶನ್ ನಟಿಸಿದ್ದಾರೆ. ಹಿಂದಿ, ಭೋಜಪುರಿ, ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲು ಅರ್ಜುನ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ರೇಸ್ ಗುರಂ’ ಚಿತ್ರದಲ್ಲಿ ಅವರು ಮಾಡಿದ ವಿಲನ್ ಪಾತ್ರ ಸಾಕಷ್ಟು ಗಮನ ಸಳೆಯಿತು. 2019ರ ಲೋಕಸಭೆ ಚುನಾವಣೆಯಲ್ಲಿ ಗೋರಖ್‌ಪುರ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

5 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

21 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago