ಚಿತ್ರ ಮಂಜರಿ

ನಟ ಸುದೀಪ್ ಮಾನನಷ್ಟ ಮೊಕದ್ದಮೆ ಪ್ರಕರಣ: ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ

ಬೆಂಗಳೂರು: ನಟ ಕಿಚ್ಚಾ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೋರ್ಟ್ ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದೆ.

ನಟ ಸುದೀಪ್ ರ ಮಾನಹಾನಿ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರ ನಿರ್ಮಾಪಕ ಎನ್‌.ಎಂ.ಕುಮಾರ್ ಹಾಗೂ ಎನ್‌.ಎಂ.ಸುರೇಶ್ ಅವರಿಗೆ ಸಮನ್ಸ್ ಜಾರಿಗೊಳಿಸಲು ನಗರದ 13ನೇ ಎಸಿಎಂಎಂ ಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಈ ಕುರಿತಂತೆ ಗುರುವಾರವಷ್ಟೇ (ಆಗಸ್ಟ್10) ಫಿರ್ಯಾದುದಾರ ಸುದೀಪ್‌ ಅವರ ಸ್ವಯಂ ಹೇಳಿಕೆ ದಾಖಲು ಮಾಡಿಕೊಂಡಿದ್ದ ನ್ಯಾಯಾಧೀಶ ವೆಂಕಣ್ಣ ಬಸಪ್ಪ ಹೊಸಮನಿ ಅವರು, ಶುಕ್ರವಾರ ಆರೋಪಿಗಳಿಗೆ ಸಮನ್ಸ್‌ ಜಾರಿಗೊಳಿಸಿದ್ದು, ಇದೇ 26ರಂದು ಕೋರ್ಟ್‌ಗೆ ಹಾಜರಾಗುವಂತೆ ಆದೇಶಿಸಿದ್ದಾರೆ.

ಏನಿದು ಪ್ರಕರಣ?
ತಮ್ಮ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ, ವರ್ಚಸ್ಸಿಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ ಅವರು ಎಂ.ಎನ್. ಕುಮಾರ್ ಮತ್ತು ಎಂ.ಎನ್.ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ‘ನನ್ನ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ ಸುದೀಪ್‌ ಕಳೆದ 7-8 ವರ್ಷಗಳ ಹಿಂದೆ ನನ್ನಿಂದ ಮುಂಗಡ ಹಣ ಪಡೆದಿದ್ದರು. ಆದರೆ, ಇದುವರೆಗೂ ಕಾಲ್‌ಶೀಟ್‌ ನೀಡಿಲ್ಲ. ನನ್ನ ಹಣವನ್ನೂ ವಾಪಸ್‌ ಕೊಡುತ್ತಿಲ್ಲ’ ಎಂದು ನಿರ್ಮಾಪಕ ಎಂ.ಎನ್.ಕುಮಾರ್‌ ಆರೋಪಿಸಿದ್ದರು.

ಸಮಸ್ಯೆ ಬಗೆಹರಿಸುವಂತೆ ಕೋರಿ ಫಿಲ್ಮ್‌ ಛೇಂಬರ್‌ ಮೆಟ್ಟಿಲೇರಿದ್ದರು. ಮಾಧ್ಯಮ ಗೋಷ್ಠಿಗಳಲ್ಲೂ ಈ ಕುರಿತಂತೆ ಅವರು ಸಾರ್ವಜನಿಕವಾಗಿ ಸುದೀಪ್‌ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಸುದೀಪ್‌ ಕೋರ್ಟ್ ಮೆಟ್ಟಿಲೇರಿದ್ದು, ‘ಕುಮಾರ್ ಹೇಳಿಕೆಯಿಂದ ನಾನು ಇಷ್ಟು ವರ್ಷಗಳ ಕಾಲ ಕಷ್ಟಪಟ್ಟು ಗಳಿಸಿದ್ದ ವರ್ಚಸ್ಸಿಗೆ ಧಕ್ಕೆಯಾಗಿದೆ. ನನ್ನ ಮಾನಹಾನಿಯಾಗಿದೆ‘ ಎಂದು ಆರೋಪಿಸಿ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.

andolanait

Recent Posts

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

37 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

2 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

3 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

4 hours ago