ಚಿತ್ರ ಮಂಜರಿ

ನಟ ಸುದೀಪ್ ಮಾನನಷ್ಟ ಮೊಕದ್ದಮೆ ಪ್ರಕರಣ: ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ

ಬೆಂಗಳೂರು: ನಟ ಕಿಚ್ಚಾ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೋರ್ಟ್ ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದೆ.

ನಟ ಸುದೀಪ್ ರ ಮಾನಹಾನಿ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರ ನಿರ್ಮಾಪಕ ಎನ್‌.ಎಂ.ಕುಮಾರ್ ಹಾಗೂ ಎನ್‌.ಎಂ.ಸುರೇಶ್ ಅವರಿಗೆ ಸಮನ್ಸ್ ಜಾರಿಗೊಳಿಸಲು ನಗರದ 13ನೇ ಎಸಿಎಂಎಂ ಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಈ ಕುರಿತಂತೆ ಗುರುವಾರವಷ್ಟೇ (ಆಗಸ್ಟ್10) ಫಿರ್ಯಾದುದಾರ ಸುದೀಪ್‌ ಅವರ ಸ್ವಯಂ ಹೇಳಿಕೆ ದಾಖಲು ಮಾಡಿಕೊಂಡಿದ್ದ ನ್ಯಾಯಾಧೀಶ ವೆಂಕಣ್ಣ ಬಸಪ್ಪ ಹೊಸಮನಿ ಅವರು, ಶುಕ್ರವಾರ ಆರೋಪಿಗಳಿಗೆ ಸಮನ್ಸ್‌ ಜಾರಿಗೊಳಿಸಿದ್ದು, ಇದೇ 26ರಂದು ಕೋರ್ಟ್‌ಗೆ ಹಾಜರಾಗುವಂತೆ ಆದೇಶಿಸಿದ್ದಾರೆ.

ಏನಿದು ಪ್ರಕರಣ?
ತಮ್ಮ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ, ವರ್ಚಸ್ಸಿಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ ಅವರು ಎಂ.ಎನ್. ಕುಮಾರ್ ಮತ್ತು ಎಂ.ಎನ್.ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ‘ನನ್ನ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ ಸುದೀಪ್‌ ಕಳೆದ 7-8 ವರ್ಷಗಳ ಹಿಂದೆ ನನ್ನಿಂದ ಮುಂಗಡ ಹಣ ಪಡೆದಿದ್ದರು. ಆದರೆ, ಇದುವರೆಗೂ ಕಾಲ್‌ಶೀಟ್‌ ನೀಡಿಲ್ಲ. ನನ್ನ ಹಣವನ್ನೂ ವಾಪಸ್‌ ಕೊಡುತ್ತಿಲ್ಲ’ ಎಂದು ನಿರ್ಮಾಪಕ ಎಂ.ಎನ್.ಕುಮಾರ್‌ ಆರೋಪಿಸಿದ್ದರು.

ಸಮಸ್ಯೆ ಬಗೆಹರಿಸುವಂತೆ ಕೋರಿ ಫಿಲ್ಮ್‌ ಛೇಂಬರ್‌ ಮೆಟ್ಟಿಲೇರಿದ್ದರು. ಮಾಧ್ಯಮ ಗೋಷ್ಠಿಗಳಲ್ಲೂ ಈ ಕುರಿತಂತೆ ಅವರು ಸಾರ್ವಜನಿಕವಾಗಿ ಸುದೀಪ್‌ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಸುದೀಪ್‌ ಕೋರ್ಟ್ ಮೆಟ್ಟಿಲೇರಿದ್ದು, ‘ಕುಮಾರ್ ಹೇಳಿಕೆಯಿಂದ ನಾನು ಇಷ್ಟು ವರ್ಷಗಳ ಕಾಲ ಕಷ್ಟಪಟ್ಟು ಗಳಿಸಿದ್ದ ವರ್ಚಸ್ಸಿಗೆ ಧಕ್ಕೆಯಾಗಿದೆ. ನನ್ನ ಮಾನಹಾನಿಯಾಗಿದೆ‘ ಎಂದು ಆರೋಪಿಸಿ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago