ಚಿತ್ರ ಮಂಜರಿ

ಡಿಕೆ ಶಿವಕುಮಾರ್‌ ಭೇಟಿಯಾದ ನಟ ಸುದೀಪ್‌: ಯಾಕೆ ಗೊತ್ತಾ!

ಬೆಂಗಳೂರು : ಮೇರು ನಟ ಡಾ. ವಿಷ್ಣುವರ್ಧನ್‌ ಅವರ ಪುಣ್ಯಭೂಮಿಯನ್ನು ಅಭಿಮಾನ್‌ ಸ್ಟುಡಿಯೋದಲ್ಲಿ ನಿರ್ಮಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಭಾನುವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟ‌ದಿಂದ ಪ್ರತಿಭಟನೆ ನಡೆಸಲಾಗಿದೆ.

ಈ ವಿಚಾರದಲ್ಲಿ ಅಭಿಮಾನಿಗಳನ್ನು ಬೆಂಬಲಿಸಿ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸದೀಪ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು. ಇದರ ಬೆನ್ನಲ್ಲೇ ಕಿಚ್ಚ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಅವರ ಸದಾಶಿವನಗರ ನಿವಾಸದಲ್ಲಿ ಭಾನುವಾರ ಸಂಜೆ ಭೇಟಿಯಾಗಿ ಪುಣ್ಯಭೂಮಿ ಕುರಿತು ಚರ್ಚೆ ನಡೆಸಿದ್ದಾರೆ.

ಡಾ.ವಿಷ್ಣುವರ್ಧನ್‌ ಅವರ ಸ್ಮಾರಕವು ಮೈಸೂರಿನಲ್ಲಿ ಇದ್ದರೂ ಅವರ ಅಭಿಮಾನಿಗಳ ಕೋರಿಕೆಯಂತೆ ಅಂತ್ಯಸಂಸ್ಕಾರಗೊಂಡ ಜಾಗದಲ್ಲಿಯೇ (ಅಭಿಮಾನ್‌ ಸ್ಟುಡಿಯೋ) ಪುಣ್ಯಭೂಮಿ ನಿರ್ಮಿಸಬೇಕೆಂದು ಡಿಸಿಎಂಗೆ ಕಿಚ್ಚ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಕಿಚ್ಚನ ಟ್ವೀಟ್‌: ಡಾ. ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಅಭಿಮಾನಿಗಳಿಗೆ ಬೆಂಬಲ ಸೂಚಿಸಿದ್ದಾರೆ.

https://x.com/KicchaSudeep/status/1736101405403029577?s=20

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

3 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

14 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

14 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

14 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

14 hours ago