ಚಿತ್ರ ಮಂಜರಿ

ನಟ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ, ಸಿಸಿಬಿಯಿಂದ ಆಪ್ತನ ಬಂಧನ!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಸುದೀಪ್ ಅವರಿಗೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರಿಂದ ಡೈರೆಕ್ಟರ್ ರಮೇಶ್ ಕಿಟ್ಟಿ ಎಂಬಾತನ ಬಂಧನವಾಗಿದ್ದು, ಈತ ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ಎಂದು ತಿಳಿದುಬಂದಿದೆ.

ಸುದೀಪ್  ಅವರ ಆಪ್ತನಾಗಿದ್ದ ರಮೇಶ್ ಈ ಹಿಂದೆ ಹಲವು ಸಿನಿಮಾಗಳನ್ನ ಡೈರೆಕ್ಟ್ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು. ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿದ್ದೆ ಎಂದು ಸಿಸಿಬಿ ವಿಚಾರಣೆಯಲ್ಲಿ ರಮೇಶ್ ಬಾಯ್ಬಿಟ್ಟಿದ್ದಾನಂತೆ.

ಈ ಪ್ರಕರಣ ಹಿಂದೆ ಇನ್ನೂ ಕೆಲ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಜೆ.ಪಿ.ನಗರದಲ್ಲಿ ಸುದೀಪ್‌ ಅವರ ಮನೆಗೆ ಕಳೆದ ಮಾ.29 ರಂದು ಅನಾಮಧೇಯ ವ್ಯಕ್ತಿಯಿಂದ ಅಂಚೆ ಮೂಲಕ ಈ ಬೆದರಿಕೆ ಪತ್ರಗಳು ಬಂದಿದ್ದು, ಸುದೀಪ್‌ ಅವರ ಮ್ಯಾನೇಜರ್‌ ಹಾಗೂ ನಿರ್ಮಾಪಕ ಮಂಜುನಾಥ್‌ ಅಲಿಯಾಸ್‌ ಜಾಕ್‌ ಮಂಜು ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಅವರು, ಈ ಸಂಬಂಧ ಸಿಸಿಬಿ ತನಿಖೆಗೆ ಆದೇಶಿಸಿದ್ದರು.

ಜೆ.ಪಿ.ನಗರದ 6ನೇ ಹಂತದ ಕೆ.ಆರ್‌. ಲೇಔಟ್‌ 17ನೇ ಕ್ರಾಸ್‌ನಲ್ಲಿ ತಮ್ಮ ಪೋಷಕರ ಜತೆ ಸುದೀಪ್‌ ನೆಲೆಸಿದ್ದಾರೆ. ಮಾ.29ಕ್ಕೆ ಸುದೀಪ್‌ ಅವರ ವಿಳಾಸಕ್ಕೆ ಅಂಚೆ ಮೂಲಕ ಎರಡು ಪತ್ರಗಳು ಬಂದಿದ್ದವು. ಇವುಗಳನ್ನು ಸ್ವೀಕರಿಸಿದ ಸುದೀಪ್‌ ಕುಟುಂಬದವರು, ಅವುಗಳನ್ನು ತೆರೆದು ಓದಿದಾಗ ಅವಾಚ್ಯ ಶಬ್ದಗಳ ನಿಂದನೆ ಮತ್ತು ಬೆದರಿಕೆ ಇದ್ದದ್ದು ನೋಡಿ ಆತಂಕಗೊಂಡಿದ್ದರು.  ಸುದೀಪ್‌ ಸೂಚನೆ ಮೇರೆಗೆ ಪುಟ್ಟೇನಹಳ್ಳಿ ಠಾಣೆಗೆ ಅವರ ಮ್ಯಾನೇಜರ್‌ ದೂರು ನೀಡಿದ್ದರು.

ಈ ಬಗ್ಗೆ ಮಾಧ್ಯಮಕ್ಕೆ ಉತ್ತರಿಸಿದ್ದ ನಟ ಸುದೀಪ್, ನನಗೆ ಬೆದರಿಕೆ ಪತ್ರ ಬಂದಿರುವುದು ನಿಜ. ಈ ಪತ್ರ ಯಾರೂ ಬರೆದಿದ್ದಾರೆ ಎಂಬುದು ಸಹ ಗೊತ್ತಿದೆ. ಪತ್ರ ಬರೆದವವನಿಗೆ ನನ್ನ ಮನೆ ವಿಳಾಸ ಚೆನ್ನಾಗಿ ತಿಳಿದಿದೆ. ಹೀಗಿದ್ದೂ ಯಾಕೆ ಪೋಸ್ಟ್‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಚಿತ್ರರಂಗದಲ್ಲಿರುವ ಒಬ್ಬಾತ ಅದನ್ನು ಕಳುಹಿಸಿದ್ದಾನೆ. ಆತನಿಗೆ ತಕ್ಕ ಉತ್ತರ ಕೊಡುತ್ತೇನೆ’ ಎಂದಿದ್ದರು.  ಸದ್ಯ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಹಿನ್ನೆಲೆ ಓರ್ವನನ್ನು ಬಂಧಿಸಲಾಗಿದ್ದು, ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

1 hour ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

11 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

12 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

12 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

13 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

13 hours ago