ಚಿತ್ರ ಮಂಜರಿ

ನಟ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ, ಸಿಸಿಬಿಯಿಂದ ಆಪ್ತನ ಬಂಧನ!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಸುದೀಪ್ ಅವರಿಗೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರಿಂದ ಡೈರೆಕ್ಟರ್ ರಮೇಶ್ ಕಿಟ್ಟಿ ಎಂಬಾತನ ಬಂಧನವಾಗಿದ್ದು, ಈತ ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ಎಂದು ತಿಳಿದುಬಂದಿದೆ.

ಸುದೀಪ್  ಅವರ ಆಪ್ತನಾಗಿದ್ದ ರಮೇಶ್ ಈ ಹಿಂದೆ ಹಲವು ಸಿನಿಮಾಗಳನ್ನ ಡೈರೆಕ್ಟ್ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು. ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿದ್ದೆ ಎಂದು ಸಿಸಿಬಿ ವಿಚಾರಣೆಯಲ್ಲಿ ರಮೇಶ್ ಬಾಯ್ಬಿಟ್ಟಿದ್ದಾನಂತೆ.

ಈ ಪ್ರಕರಣ ಹಿಂದೆ ಇನ್ನೂ ಕೆಲ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಜೆ.ಪಿ.ನಗರದಲ್ಲಿ ಸುದೀಪ್‌ ಅವರ ಮನೆಗೆ ಕಳೆದ ಮಾ.29 ರಂದು ಅನಾಮಧೇಯ ವ್ಯಕ್ತಿಯಿಂದ ಅಂಚೆ ಮೂಲಕ ಈ ಬೆದರಿಕೆ ಪತ್ರಗಳು ಬಂದಿದ್ದು, ಸುದೀಪ್‌ ಅವರ ಮ್ಯಾನೇಜರ್‌ ಹಾಗೂ ನಿರ್ಮಾಪಕ ಮಂಜುನಾಥ್‌ ಅಲಿಯಾಸ್‌ ಜಾಕ್‌ ಮಂಜು ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಅವರು, ಈ ಸಂಬಂಧ ಸಿಸಿಬಿ ತನಿಖೆಗೆ ಆದೇಶಿಸಿದ್ದರು.

ಜೆ.ಪಿ.ನಗರದ 6ನೇ ಹಂತದ ಕೆ.ಆರ್‌. ಲೇಔಟ್‌ 17ನೇ ಕ್ರಾಸ್‌ನಲ್ಲಿ ತಮ್ಮ ಪೋಷಕರ ಜತೆ ಸುದೀಪ್‌ ನೆಲೆಸಿದ್ದಾರೆ. ಮಾ.29ಕ್ಕೆ ಸುದೀಪ್‌ ಅವರ ವಿಳಾಸಕ್ಕೆ ಅಂಚೆ ಮೂಲಕ ಎರಡು ಪತ್ರಗಳು ಬಂದಿದ್ದವು. ಇವುಗಳನ್ನು ಸ್ವೀಕರಿಸಿದ ಸುದೀಪ್‌ ಕುಟುಂಬದವರು, ಅವುಗಳನ್ನು ತೆರೆದು ಓದಿದಾಗ ಅವಾಚ್ಯ ಶಬ್ದಗಳ ನಿಂದನೆ ಮತ್ತು ಬೆದರಿಕೆ ಇದ್ದದ್ದು ನೋಡಿ ಆತಂಕಗೊಂಡಿದ್ದರು.  ಸುದೀಪ್‌ ಸೂಚನೆ ಮೇರೆಗೆ ಪುಟ್ಟೇನಹಳ್ಳಿ ಠಾಣೆಗೆ ಅವರ ಮ್ಯಾನೇಜರ್‌ ದೂರು ನೀಡಿದ್ದರು.

ಈ ಬಗ್ಗೆ ಮಾಧ್ಯಮಕ್ಕೆ ಉತ್ತರಿಸಿದ್ದ ನಟ ಸುದೀಪ್, ನನಗೆ ಬೆದರಿಕೆ ಪತ್ರ ಬಂದಿರುವುದು ನಿಜ. ಈ ಪತ್ರ ಯಾರೂ ಬರೆದಿದ್ದಾರೆ ಎಂಬುದು ಸಹ ಗೊತ್ತಿದೆ. ಪತ್ರ ಬರೆದವವನಿಗೆ ನನ್ನ ಮನೆ ವಿಳಾಸ ಚೆನ್ನಾಗಿ ತಿಳಿದಿದೆ. ಹೀಗಿದ್ದೂ ಯಾಕೆ ಪೋಸ್ಟ್‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಚಿತ್ರರಂಗದಲ್ಲಿರುವ ಒಬ್ಬಾತ ಅದನ್ನು ಕಳುಹಿಸಿದ್ದಾನೆ. ಆತನಿಗೆ ತಕ್ಕ ಉತ್ತರ ಕೊಡುತ್ತೇನೆ’ ಎಂದಿದ್ದರು.  ಸದ್ಯ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಹಿನ್ನೆಲೆ ಓರ್ವನನ್ನು ಬಂಧಿಸಲಾಗಿದ್ದು, ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

andolanait

Recent Posts

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

14 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

21 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

1 hour ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago