ಚಿತ್ರ ಮಂಜರಿ

ನಟ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ, ಸಿಸಿಬಿಯಿಂದ ಆಪ್ತನ ಬಂಧನ!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಸುದೀಪ್ ಅವರಿಗೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರಿಂದ ಡೈರೆಕ್ಟರ್ ರಮೇಶ್ ಕಿಟ್ಟಿ ಎಂಬಾತನ ಬಂಧನವಾಗಿದ್ದು, ಈತ ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ಎಂದು ತಿಳಿದುಬಂದಿದೆ.

ಸುದೀಪ್  ಅವರ ಆಪ್ತನಾಗಿದ್ದ ರಮೇಶ್ ಈ ಹಿಂದೆ ಹಲವು ಸಿನಿಮಾಗಳನ್ನ ಡೈರೆಕ್ಟ್ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು. ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿದ್ದೆ ಎಂದು ಸಿಸಿಬಿ ವಿಚಾರಣೆಯಲ್ಲಿ ರಮೇಶ್ ಬಾಯ್ಬಿಟ್ಟಿದ್ದಾನಂತೆ.

ಈ ಪ್ರಕರಣ ಹಿಂದೆ ಇನ್ನೂ ಕೆಲ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಜೆ.ಪಿ.ನಗರದಲ್ಲಿ ಸುದೀಪ್‌ ಅವರ ಮನೆಗೆ ಕಳೆದ ಮಾ.29 ರಂದು ಅನಾಮಧೇಯ ವ್ಯಕ್ತಿಯಿಂದ ಅಂಚೆ ಮೂಲಕ ಈ ಬೆದರಿಕೆ ಪತ್ರಗಳು ಬಂದಿದ್ದು, ಸುದೀಪ್‌ ಅವರ ಮ್ಯಾನೇಜರ್‌ ಹಾಗೂ ನಿರ್ಮಾಪಕ ಮಂಜುನಾಥ್‌ ಅಲಿಯಾಸ್‌ ಜಾಕ್‌ ಮಂಜು ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಅವರು, ಈ ಸಂಬಂಧ ಸಿಸಿಬಿ ತನಿಖೆಗೆ ಆದೇಶಿಸಿದ್ದರು.

ಜೆ.ಪಿ.ನಗರದ 6ನೇ ಹಂತದ ಕೆ.ಆರ್‌. ಲೇಔಟ್‌ 17ನೇ ಕ್ರಾಸ್‌ನಲ್ಲಿ ತಮ್ಮ ಪೋಷಕರ ಜತೆ ಸುದೀಪ್‌ ನೆಲೆಸಿದ್ದಾರೆ. ಮಾ.29ಕ್ಕೆ ಸುದೀಪ್‌ ಅವರ ವಿಳಾಸಕ್ಕೆ ಅಂಚೆ ಮೂಲಕ ಎರಡು ಪತ್ರಗಳು ಬಂದಿದ್ದವು. ಇವುಗಳನ್ನು ಸ್ವೀಕರಿಸಿದ ಸುದೀಪ್‌ ಕುಟುಂಬದವರು, ಅವುಗಳನ್ನು ತೆರೆದು ಓದಿದಾಗ ಅವಾಚ್ಯ ಶಬ್ದಗಳ ನಿಂದನೆ ಮತ್ತು ಬೆದರಿಕೆ ಇದ್ದದ್ದು ನೋಡಿ ಆತಂಕಗೊಂಡಿದ್ದರು.  ಸುದೀಪ್‌ ಸೂಚನೆ ಮೇರೆಗೆ ಪುಟ್ಟೇನಹಳ್ಳಿ ಠಾಣೆಗೆ ಅವರ ಮ್ಯಾನೇಜರ್‌ ದೂರು ನೀಡಿದ್ದರು.

ಈ ಬಗ್ಗೆ ಮಾಧ್ಯಮಕ್ಕೆ ಉತ್ತರಿಸಿದ್ದ ನಟ ಸುದೀಪ್, ನನಗೆ ಬೆದರಿಕೆ ಪತ್ರ ಬಂದಿರುವುದು ನಿಜ. ಈ ಪತ್ರ ಯಾರೂ ಬರೆದಿದ್ದಾರೆ ಎಂಬುದು ಸಹ ಗೊತ್ತಿದೆ. ಪತ್ರ ಬರೆದವವನಿಗೆ ನನ್ನ ಮನೆ ವಿಳಾಸ ಚೆನ್ನಾಗಿ ತಿಳಿದಿದೆ. ಹೀಗಿದ್ದೂ ಯಾಕೆ ಪೋಸ್ಟ್‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಚಿತ್ರರಂಗದಲ್ಲಿರುವ ಒಬ್ಬಾತ ಅದನ್ನು ಕಳುಹಿಸಿದ್ದಾನೆ. ಆತನಿಗೆ ತಕ್ಕ ಉತ್ತರ ಕೊಡುತ್ತೇನೆ’ ಎಂದಿದ್ದರು.  ಸದ್ಯ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಹಿನ್ನೆಲೆ ಓರ್ವನನ್ನು ಬಂಧಿಸಲಾಗಿದ್ದು, ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

12 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago