ಚಿತ್ರ ಮಂಜರಿ

ನಟ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ, ಸಿಸಿಬಿಯಿಂದ ಆಪ್ತನ ಬಂಧನ!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಸುದೀಪ್ ಅವರಿಗೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರಿಂದ ಡೈರೆಕ್ಟರ್ ರಮೇಶ್ ಕಿಟ್ಟಿ ಎಂಬಾತನ ಬಂಧನವಾಗಿದ್ದು, ಈತ ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ಎಂದು ತಿಳಿದುಬಂದಿದೆ.

ಸುದೀಪ್  ಅವರ ಆಪ್ತನಾಗಿದ್ದ ರಮೇಶ್ ಈ ಹಿಂದೆ ಹಲವು ಸಿನಿಮಾಗಳನ್ನ ಡೈರೆಕ್ಟ್ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು. ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿದ್ದೆ ಎಂದು ಸಿಸಿಬಿ ವಿಚಾರಣೆಯಲ್ಲಿ ರಮೇಶ್ ಬಾಯ್ಬಿಟ್ಟಿದ್ದಾನಂತೆ.

ಈ ಪ್ರಕರಣ ಹಿಂದೆ ಇನ್ನೂ ಕೆಲ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಜೆ.ಪಿ.ನಗರದಲ್ಲಿ ಸುದೀಪ್‌ ಅವರ ಮನೆಗೆ ಕಳೆದ ಮಾ.29 ರಂದು ಅನಾಮಧೇಯ ವ್ಯಕ್ತಿಯಿಂದ ಅಂಚೆ ಮೂಲಕ ಈ ಬೆದರಿಕೆ ಪತ್ರಗಳು ಬಂದಿದ್ದು, ಸುದೀಪ್‌ ಅವರ ಮ್ಯಾನೇಜರ್‌ ಹಾಗೂ ನಿರ್ಮಾಪಕ ಮಂಜುನಾಥ್‌ ಅಲಿಯಾಸ್‌ ಜಾಕ್‌ ಮಂಜು ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಅವರು, ಈ ಸಂಬಂಧ ಸಿಸಿಬಿ ತನಿಖೆಗೆ ಆದೇಶಿಸಿದ್ದರು.

ಜೆ.ಪಿ.ನಗರದ 6ನೇ ಹಂತದ ಕೆ.ಆರ್‌. ಲೇಔಟ್‌ 17ನೇ ಕ್ರಾಸ್‌ನಲ್ಲಿ ತಮ್ಮ ಪೋಷಕರ ಜತೆ ಸುದೀಪ್‌ ನೆಲೆಸಿದ್ದಾರೆ. ಮಾ.29ಕ್ಕೆ ಸುದೀಪ್‌ ಅವರ ವಿಳಾಸಕ್ಕೆ ಅಂಚೆ ಮೂಲಕ ಎರಡು ಪತ್ರಗಳು ಬಂದಿದ್ದವು. ಇವುಗಳನ್ನು ಸ್ವೀಕರಿಸಿದ ಸುದೀಪ್‌ ಕುಟುಂಬದವರು, ಅವುಗಳನ್ನು ತೆರೆದು ಓದಿದಾಗ ಅವಾಚ್ಯ ಶಬ್ದಗಳ ನಿಂದನೆ ಮತ್ತು ಬೆದರಿಕೆ ಇದ್ದದ್ದು ನೋಡಿ ಆತಂಕಗೊಂಡಿದ್ದರು.  ಸುದೀಪ್‌ ಸೂಚನೆ ಮೇರೆಗೆ ಪುಟ್ಟೇನಹಳ್ಳಿ ಠಾಣೆಗೆ ಅವರ ಮ್ಯಾನೇಜರ್‌ ದೂರು ನೀಡಿದ್ದರು.

ಈ ಬಗ್ಗೆ ಮಾಧ್ಯಮಕ್ಕೆ ಉತ್ತರಿಸಿದ್ದ ನಟ ಸುದೀಪ್, ನನಗೆ ಬೆದರಿಕೆ ಪತ್ರ ಬಂದಿರುವುದು ನಿಜ. ಈ ಪತ್ರ ಯಾರೂ ಬರೆದಿದ್ದಾರೆ ಎಂಬುದು ಸಹ ಗೊತ್ತಿದೆ. ಪತ್ರ ಬರೆದವವನಿಗೆ ನನ್ನ ಮನೆ ವಿಳಾಸ ಚೆನ್ನಾಗಿ ತಿಳಿದಿದೆ. ಹೀಗಿದ್ದೂ ಯಾಕೆ ಪೋಸ್ಟ್‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಚಿತ್ರರಂಗದಲ್ಲಿರುವ ಒಬ್ಬಾತ ಅದನ್ನು ಕಳುಹಿಸಿದ್ದಾನೆ. ಆತನಿಗೆ ತಕ್ಕ ಉತ್ತರ ಕೊಡುತ್ತೇನೆ’ ಎಂದಿದ್ದರು.  ಸದ್ಯ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಹಿನ್ನೆಲೆ ಓರ್ವನನ್ನು ಬಂಧಿಸಲಾಗಿದ್ದು, ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

andolanait

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago