ಚಿತ್ರ ಮಂಜರಿ

ದೇವಸ್ಥಾನದಲ್ಲಿ ನಟಿ ಖುಷ್ಬೂ ಪಾದ ತೊಳೆದು ವಿಶೇಷ ಪೂಜೆ

ಕೇರಳ : ಖ್ಯಾತ ನಟಿ ಖುಷ್ಭೂ ಸುಂದರ್ ಅವರನ್ನು ಕೇರಳದ ತ್ರಿಶೂರ್ ನ ವಿಷ್ಣುಮಾಯಾ ದೇವಸ್ಥಾನಕ್ಕೆ ಆಹ್ವಾನಿಸಿ ಪಾದಪೂಜೆ ನೆರವೇರಿಸಿದ್ದಾರೆ ಪೂಜಾರಿಗಳು. ಕೇರಳ ವಿಷ್ಣುಮಾಯಾ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಸುಹಾಸಿನಿ ಪೂಜಾ ಹೆಸರಿನಲ್ಲಿ ನಾರಿ ಪೂಜೆಯನ್ನು ಮಾಡಲಾಗುತ್ತಿದೆ. ಪ್ರತಿ ವರ್ಷವೂ ಒಬ್ಬೊಬ್ಬ ಮಹಿಳೆಯನ್ನು ಆಹ್ವಾನಿಸಿ ಈ ರೀತಿ ಪೂಜೆ ನೆರವೇರಿಸಲಾಗುತ್ತದೆ.

ಈ ಬಾರಿ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೂ ಆಗಿರುವ ಖುಷ್ಣೂ ಸುಂದರ್ ಅವರನ್ನು ದೇವಸ್ಥಾನಕ್ಕೆ ಕರೆಸಿಕೊಂಡು ನಾರಿ ಪೂಜೆಯನ್ನು ಮಾಡಲಾಗಿದೆ. ಪಾದಪೂಜೆ ಸೇರಿದಂತೆ ವಿವಿಧ ಪೂಜಾ ವಿಧಾನಗಳ ಮೂಲಕ ಶಾಸ್ತ್ರೋಕ್ತವಾಗಿ ಪೂಜೆಯನ್ನು ಮಾಡಲಾಗುತ್ತದೆ.

ಪೂಜೆಯಲ್ಲಿ ಮಹಿಳೆಯರಿಗೆ ರೇಷ್ಮೆ ವಸ್ತ್ರಗಳನ್ನು ನೀಡುವುದರ ಜೊತೆ ಪಾದ ಪೂಜೆ ಮಾಡಿ, ಕೊರಳಿಗೆ ಹಾರ ಹಾಕಲಾಗುತ್ತದೆ. ಹೀಗೆ ಮಾಡಿದರೆ ಸ್ವರ್ಗದಿಂದಲೇ ದೇವತೆಯು ಧರೆಗೆ ಬಂದು, ಪಾದ ಪೂಜೆ ಮಾಡಿಸಿಕೊಳ್ಳುತ್ತಾಳೆ ಎನ್ನುವುದು ಅಲ್ಲಿನ ನಂಬಿಕೆ.

ಈ ವಿಷಯವನ್ನು ಸ್ವತಃ ಖುಷ್ಭೂ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಂತಹ ಅವಕಾಶ ನನಗೆ ಸಿಕ್ಕಿದ್ದು ನನ್ನ ಅದೃಷ್ಟ, ಶಾಂತಿ ನೆಲೆಸಲು ನಾನು ನಿರಂತರವಾಗಿ ಶ್ರಮಿಸುವೆ ಎಂದೆಲ್ಲ ಅವರು ಬರೆದುಕೊಂಡಿದ್ದಾರೆ.

ಖುಷ್ಬು ಮೂಲತಃ ಮುಸ್ಲಿಂ ಸಮುದಾಯಲ್ಲಿ ಹುಟ್ಟಿದವರು. ಇವರು ಮೂಲ ಹೆಸರು ನಖತ್ ಖಾನ್. ಸಿನಿಮಾ ರಂಗಕ್ಕೆ ಬಂದ ನಂತರ ಮತ್ತು ಮದುವೆಯ ನಂತರ ತಮ್ಮ ಹೆಸರನ್ನು ಬದಲಾಯಿಸಿಕೊಂಡರು. ಇದೀಗ ಖುಷ್ಭೂ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳು ಖುಷ್ಭೂಗಾಗಿ ದೇವಸ್ಥಾನವೊಂದನ್ನು ಕಟ್ಟಿದ್ದಾರೆ.

lokesh

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

2 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

2 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

3 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

3 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

3 hours ago