ಕೇರಳ : ಖ್ಯಾತ ನಟಿ ಖುಷ್ಭೂ ಸುಂದರ್ ಅವರನ್ನು ಕೇರಳದ ತ್ರಿಶೂರ್ ನ ವಿಷ್ಣುಮಾಯಾ ದೇವಸ್ಥಾನಕ್ಕೆ ಆಹ್ವಾನಿಸಿ ಪಾದಪೂಜೆ ನೆರವೇರಿಸಿದ್ದಾರೆ ಪೂಜಾರಿಗಳು. ಕೇರಳ ವಿಷ್ಣುಮಾಯಾ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಸುಹಾಸಿನಿ ಪೂಜಾ ಹೆಸರಿನಲ್ಲಿ ನಾರಿ ಪೂಜೆಯನ್ನು ಮಾಡಲಾಗುತ್ತಿದೆ. ಪ್ರತಿ ವರ್ಷವೂ ಒಬ್ಬೊಬ್ಬ ಮಹಿಳೆಯನ್ನು ಆಹ್ವಾನಿಸಿ ಈ ರೀತಿ ಪೂಜೆ ನೆರವೇರಿಸಲಾಗುತ್ತದೆ.
ಈ ಬಾರಿ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೂ ಆಗಿರುವ ಖುಷ್ಣೂ ಸುಂದರ್ ಅವರನ್ನು ದೇವಸ್ಥಾನಕ್ಕೆ ಕರೆಸಿಕೊಂಡು ನಾರಿ ಪೂಜೆಯನ್ನು ಮಾಡಲಾಗಿದೆ. ಪಾದಪೂಜೆ ಸೇರಿದಂತೆ ವಿವಿಧ ಪೂಜಾ ವಿಧಾನಗಳ ಮೂಲಕ ಶಾಸ್ತ್ರೋಕ್ತವಾಗಿ ಪೂಜೆಯನ್ನು ಮಾಡಲಾಗುತ್ತದೆ.
ಪೂಜೆಯಲ್ಲಿ ಮಹಿಳೆಯರಿಗೆ ರೇಷ್ಮೆ ವಸ್ತ್ರಗಳನ್ನು ನೀಡುವುದರ ಜೊತೆ ಪಾದ ಪೂಜೆ ಮಾಡಿ, ಕೊರಳಿಗೆ ಹಾರ ಹಾಕಲಾಗುತ್ತದೆ. ಹೀಗೆ ಮಾಡಿದರೆ ಸ್ವರ್ಗದಿಂದಲೇ ದೇವತೆಯು ಧರೆಗೆ ಬಂದು, ಪಾದ ಪೂಜೆ ಮಾಡಿಸಿಕೊಳ್ಳುತ್ತಾಳೆ ಎನ್ನುವುದು ಅಲ್ಲಿನ ನಂಬಿಕೆ.
ಈ ವಿಷಯವನ್ನು ಸ್ವತಃ ಖುಷ್ಭೂ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಂತಹ ಅವಕಾಶ ನನಗೆ ಸಿಕ್ಕಿದ್ದು ನನ್ನ ಅದೃಷ್ಟ, ಶಾಂತಿ ನೆಲೆಸಲು ನಾನು ನಿರಂತರವಾಗಿ ಶ್ರಮಿಸುವೆ ಎಂದೆಲ್ಲ ಅವರು ಬರೆದುಕೊಂಡಿದ್ದಾರೆ.
ಖುಷ್ಬು ಮೂಲತಃ ಮುಸ್ಲಿಂ ಸಮುದಾಯಲ್ಲಿ ಹುಟ್ಟಿದವರು. ಇವರು ಮೂಲ ಹೆಸರು ನಖತ್ ಖಾನ್. ಸಿನಿಮಾ ರಂಗಕ್ಕೆ ಬಂದ ನಂತರ ಮತ್ತು ಮದುವೆಯ ನಂತರ ತಮ್ಮ ಹೆಸರನ್ನು ಬದಲಾಯಿಸಿಕೊಂಡರು. ಇದೀಗ ಖುಷ್ಭೂ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳು ಖುಷ್ಭೂಗಾಗಿ ದೇವಸ್ಥಾನವೊಂದನ್ನು ಕಟ್ಟಿದ್ದಾರೆ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…