ಕೇರಳ : ಖ್ಯಾತ ನಟಿ ಖುಷ್ಭೂ ಸುಂದರ್ ಅವರನ್ನು ಕೇರಳದ ತ್ರಿಶೂರ್ ನ ವಿಷ್ಣುಮಾಯಾ ದೇವಸ್ಥಾನಕ್ಕೆ ಆಹ್ವಾನಿಸಿ ಪಾದಪೂಜೆ ನೆರವೇರಿಸಿದ್ದಾರೆ ಪೂಜಾರಿಗಳು. ಕೇರಳ ವಿಷ್ಣುಮಾಯಾ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಸುಹಾಸಿನಿ ಪೂಜಾ ಹೆಸರಿನಲ್ಲಿ ನಾರಿ ಪೂಜೆಯನ್ನು ಮಾಡಲಾಗುತ್ತಿದೆ. ಪ್ರತಿ ವರ್ಷವೂ ಒಬ್ಬೊಬ್ಬ ಮಹಿಳೆಯನ್ನು ಆಹ್ವಾನಿಸಿ ಈ ರೀತಿ ಪೂಜೆ ನೆರವೇರಿಸಲಾಗುತ್ತದೆ.
ಈ ಬಾರಿ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೂ ಆಗಿರುವ ಖುಷ್ಣೂ ಸುಂದರ್ ಅವರನ್ನು ದೇವಸ್ಥಾನಕ್ಕೆ ಕರೆಸಿಕೊಂಡು ನಾರಿ ಪೂಜೆಯನ್ನು ಮಾಡಲಾಗಿದೆ. ಪಾದಪೂಜೆ ಸೇರಿದಂತೆ ವಿವಿಧ ಪೂಜಾ ವಿಧಾನಗಳ ಮೂಲಕ ಶಾಸ್ತ್ರೋಕ್ತವಾಗಿ ಪೂಜೆಯನ್ನು ಮಾಡಲಾಗುತ್ತದೆ.
ಪೂಜೆಯಲ್ಲಿ ಮಹಿಳೆಯರಿಗೆ ರೇಷ್ಮೆ ವಸ್ತ್ರಗಳನ್ನು ನೀಡುವುದರ ಜೊತೆ ಪಾದ ಪೂಜೆ ಮಾಡಿ, ಕೊರಳಿಗೆ ಹಾರ ಹಾಕಲಾಗುತ್ತದೆ. ಹೀಗೆ ಮಾಡಿದರೆ ಸ್ವರ್ಗದಿಂದಲೇ ದೇವತೆಯು ಧರೆಗೆ ಬಂದು, ಪಾದ ಪೂಜೆ ಮಾಡಿಸಿಕೊಳ್ಳುತ್ತಾಳೆ ಎನ್ನುವುದು ಅಲ್ಲಿನ ನಂಬಿಕೆ.
ಈ ವಿಷಯವನ್ನು ಸ್ವತಃ ಖುಷ್ಭೂ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಂತಹ ಅವಕಾಶ ನನಗೆ ಸಿಕ್ಕಿದ್ದು ನನ್ನ ಅದೃಷ್ಟ, ಶಾಂತಿ ನೆಲೆಸಲು ನಾನು ನಿರಂತರವಾಗಿ ಶ್ರಮಿಸುವೆ ಎಂದೆಲ್ಲ ಅವರು ಬರೆದುಕೊಂಡಿದ್ದಾರೆ.
ಖುಷ್ಬು ಮೂಲತಃ ಮುಸ್ಲಿಂ ಸಮುದಾಯಲ್ಲಿ ಹುಟ್ಟಿದವರು. ಇವರು ಮೂಲ ಹೆಸರು ನಖತ್ ಖಾನ್. ಸಿನಿಮಾ ರಂಗಕ್ಕೆ ಬಂದ ನಂತರ ಮತ್ತು ಮದುವೆಯ ನಂತರ ತಮ್ಮ ಹೆಸರನ್ನು ಬದಲಾಯಿಸಿಕೊಂಡರು. ಇದೀಗ ಖುಷ್ಭೂ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳು ಖುಷ್ಭೂಗಾಗಿ ದೇವಸ್ಥಾನವೊಂದನ್ನು ಕಟ್ಟಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…