ಕೇರಳ : ಖ್ಯಾತ ನಟಿ ಖುಷ್ಭೂ ಸುಂದರ್ ಅವರನ್ನು ಕೇರಳದ ತ್ರಿಶೂರ್ ನ ವಿಷ್ಣುಮಾಯಾ ದೇವಸ್ಥಾನಕ್ಕೆ ಆಹ್ವಾನಿಸಿ ಪಾದಪೂಜೆ ನೆರವೇರಿಸಿದ್ದಾರೆ ಪೂಜಾರಿಗಳು. ಕೇರಳ ವಿಷ್ಣುಮಾಯಾ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಸುಹಾಸಿನಿ ಪೂಜಾ ಹೆಸರಿನಲ್ಲಿ ನಾರಿ ಪೂಜೆಯನ್ನು ಮಾಡಲಾಗುತ್ತಿದೆ. ಪ್ರತಿ ವರ್ಷವೂ ಒಬ್ಬೊಬ್ಬ ಮಹಿಳೆಯನ್ನು ಆಹ್ವಾನಿಸಿ ಈ ರೀತಿ ಪೂಜೆ ನೆರವೇರಿಸಲಾಗುತ್ತದೆ.
ಈ ಬಾರಿ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೂ ಆಗಿರುವ ಖುಷ್ಣೂ ಸುಂದರ್ ಅವರನ್ನು ದೇವಸ್ಥಾನಕ್ಕೆ ಕರೆಸಿಕೊಂಡು ನಾರಿ ಪೂಜೆಯನ್ನು ಮಾಡಲಾಗಿದೆ. ಪಾದಪೂಜೆ ಸೇರಿದಂತೆ ವಿವಿಧ ಪೂಜಾ ವಿಧಾನಗಳ ಮೂಲಕ ಶಾಸ್ತ್ರೋಕ್ತವಾಗಿ ಪೂಜೆಯನ್ನು ಮಾಡಲಾಗುತ್ತದೆ.
ಪೂಜೆಯಲ್ಲಿ ಮಹಿಳೆಯರಿಗೆ ರೇಷ್ಮೆ ವಸ್ತ್ರಗಳನ್ನು ನೀಡುವುದರ ಜೊತೆ ಪಾದ ಪೂಜೆ ಮಾಡಿ, ಕೊರಳಿಗೆ ಹಾರ ಹಾಕಲಾಗುತ್ತದೆ. ಹೀಗೆ ಮಾಡಿದರೆ ಸ್ವರ್ಗದಿಂದಲೇ ದೇವತೆಯು ಧರೆಗೆ ಬಂದು, ಪಾದ ಪೂಜೆ ಮಾಡಿಸಿಕೊಳ್ಳುತ್ತಾಳೆ ಎನ್ನುವುದು ಅಲ್ಲಿನ ನಂಬಿಕೆ.
ಈ ವಿಷಯವನ್ನು ಸ್ವತಃ ಖುಷ್ಭೂ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಂತಹ ಅವಕಾಶ ನನಗೆ ಸಿಕ್ಕಿದ್ದು ನನ್ನ ಅದೃಷ್ಟ, ಶಾಂತಿ ನೆಲೆಸಲು ನಾನು ನಿರಂತರವಾಗಿ ಶ್ರಮಿಸುವೆ ಎಂದೆಲ್ಲ ಅವರು ಬರೆದುಕೊಂಡಿದ್ದಾರೆ.
ಖುಷ್ಬು ಮೂಲತಃ ಮುಸ್ಲಿಂ ಸಮುದಾಯಲ್ಲಿ ಹುಟ್ಟಿದವರು. ಇವರು ಮೂಲ ಹೆಸರು ನಖತ್ ಖಾನ್. ಸಿನಿಮಾ ರಂಗಕ್ಕೆ ಬಂದ ನಂತರ ಮತ್ತು ಮದುವೆಯ ನಂತರ ತಮ್ಮ ಹೆಸರನ್ನು ಬದಲಾಯಿಸಿಕೊಂಡರು. ಇದೀಗ ಖುಷ್ಭೂ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳು ಖುಷ್ಭೂಗಾಗಿ ದೇವಸ್ಥಾನವೊಂದನ್ನು ಕಟ್ಟಿದ್ದಾರೆ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…