ಬೆಂಗಳೂರು : ನಟಿ ಮೇಘನಾ ರಾಜ್ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್’ ಎಂಬ ಟ್ಯಾಗ್ ಲೈನ್ ಇಡಲಾಗಿದೆ.
ನಟಿ ಮೇಘನಾ ರಾಜ್ ಸರ್ಜಾ ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದಿಂದ ಕುಗ್ಗಿದ್ದ ಅವರು, ಬಳಿಕ ಪುತ್ರನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಈಗ ಸಿನಿಮಾಗಾಗಿಯೂ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಮೇಘನಾ ರಾಜ್ ಅವರ ಕಮ್ಬ್ಯಾಕ್ ಚಿತ್ರಕ್ಕೆ ಪನ್ನಗ ಭರಣ ಬಂಡವಾಳ ಹೂಡಲಿದ್ದಾರೆ ಹಾಗೂ ವಿಶಾಲ್ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಒಂದಷ್ಟು ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಈಗ ಆ ಚಿತ್ರಕ್ಕೆ ಶೀರ್ಷಿಕೆ ಏನೆಂಬುದು ರಿವೀಲ್ ಆಗಿದೆ. ‘ತತ್ಸಮ ತದ್ಭವʼ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸುವಂತಿದೆ.
ಮೇಘನಾ ರಾಜ್ ಸರ್ಜಾ ಅವರು ಸ್ಕ್ರಿಪ್ಟ್ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಾರೆ. ಈ ಬಾರಿ ಅವರು ಆಯ್ದುಕೊಂಡಿರುವ ‘ತತ್ಸಮ ತದ್ಭವ’ ಸಿನಿಮಾದ ಕತೆ ಕೂಡ ಸಖತ್ ತೀವ್ರತೆಯಿಂದ ಕೂಡಿರುವಂತಿದೆ. ಮೇಘನಾ ಅವರ ಬಾಯಿಯನ್ನು ಯಾರೋ ಮುಚ್ಚಿರುವ ರೀತಿಯಲ್ಲಿ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿ ಭಯ ಎದ್ದು ಕಾಣಿಸುತ್ತಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್’ ಎಂಬ ಟ್ಯಾಗ್ ಲೈನ್ ಕೂಡ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…