ಬೆಂಗಳೂರು : ನಟಿ ಮೇಘನಾ ರಾಜ್ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್’ ಎಂಬ ಟ್ಯಾಗ್ ಲೈನ್ ಇಡಲಾಗಿದೆ.
ನಟಿ ಮೇಘನಾ ರಾಜ್ ಸರ್ಜಾ ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದಿಂದ ಕುಗ್ಗಿದ್ದ ಅವರು, ಬಳಿಕ ಪುತ್ರನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಈಗ ಸಿನಿಮಾಗಾಗಿಯೂ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಮೇಘನಾ ರಾಜ್ ಅವರ ಕಮ್ಬ್ಯಾಕ್ ಚಿತ್ರಕ್ಕೆ ಪನ್ನಗ ಭರಣ ಬಂಡವಾಳ ಹೂಡಲಿದ್ದಾರೆ ಹಾಗೂ ವಿಶಾಲ್ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಒಂದಷ್ಟು ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಈಗ ಆ ಚಿತ್ರಕ್ಕೆ ಶೀರ್ಷಿಕೆ ಏನೆಂಬುದು ರಿವೀಲ್ ಆಗಿದೆ. ‘ತತ್ಸಮ ತದ್ಭವʼ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸುವಂತಿದೆ.
ಮೇಘನಾ ರಾಜ್ ಸರ್ಜಾ ಅವರು ಸ್ಕ್ರಿಪ್ಟ್ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಾರೆ. ಈ ಬಾರಿ ಅವರು ಆಯ್ದುಕೊಂಡಿರುವ ‘ತತ್ಸಮ ತದ್ಭವ’ ಸಿನಿಮಾದ ಕತೆ ಕೂಡ ಸಖತ್ ತೀವ್ರತೆಯಿಂದ ಕೂಡಿರುವಂತಿದೆ. ಮೇಘನಾ ಅವರ ಬಾಯಿಯನ್ನು ಯಾರೋ ಮುಚ್ಚಿರುವ ರೀತಿಯಲ್ಲಿ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿ ಭಯ ಎದ್ದು ಕಾಣಿಸುತ್ತಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್’ ಎಂಬ ಟ್ಯಾಗ್ ಲೈನ್ ಕೂಡ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…