ಚಿತ್ರ ಮಂಜರಿ

‘ತತ್ಸಮ ತದ್ಭವ’ ಫಸ್ಟ್​ ಲುಕ್​ ಹಂಚಿಕೊಂಡ ನಟಿ ಮೇಘನಾ ರಾಜ್‌

ಬೆಂಗಳೂರು : ನಟಿ ಮೇಘನಾ ರಾಜ್​ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಇಡಲಾಗಿದೆ.


ನಟಿ ಮೇಘನಾ ರಾಜ್​ ಸರ್ಜಾ ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದಿಂದ ಕುಗ್ಗಿದ್ದ ಅವರು, ಬಳಿಕ ಪುತ್ರನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಈಗ ಸಿನಿಮಾಗಾಗಿಯೂ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಮೇಘನಾ ರಾಜ್ ಅವರ ಕಮ್​ಬ್ಯಾಕ್​ ಚಿತ್ರಕ್ಕೆ ಪನ್ನಗ ಭರಣ  ಬಂಡವಾಳ ಹೂಡಲಿದ್ದಾರೆ ಹಾಗೂ ವಿಶಾಲ್​ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಒಂದಷ್ಟು ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಈಗ ಆ ಚಿತ್ರಕ್ಕೆ ಶೀರ್ಷಿಕೆ ಏನೆಂಬುದು ರಿವೀಲ್​ ಆಗಿದೆ. ‘ತತ್ಸಮ ತದ್ಭವʼ ಎಂದು ಟೈಟಲ್​ ಇಡಲಾಗಿದೆ. ಈ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಕೂಡ ಬಿಡುಗಡೆ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸುವಂತಿದೆ.

ಮೇಘನಾ ರಾಜ್​ ಸರ್ಜಾ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಾರೆ. ಈ ಬಾರಿ ಅವರು ಆಯ್ದುಕೊಂಡಿರುವ ‘ತತ್ಸಮ ತದ್ಭವ’ ಸಿನಿಮಾದ ಕತೆ ಕೂಡ ಸಖತ್​ ತೀವ್ರತೆಯಿಂದ ಕೂಡಿರುವಂತಿದೆ. ಮೇಘನಾ ಅವರ ಬಾಯಿಯನ್ನು ಯಾರೋ ಮುಚ್ಚಿರುವ ರೀತಿಯಲ್ಲಿ ಫಸ್ಟ್ ಲುಕ್​ ಪೋಸ್ಟರ್​ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿ ಭಯ ಎದ್ದು ಕಾಣಿಸುತ್ತಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಕೂಡ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

3 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

3 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

3 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

3 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

3 hours ago