ಚಿತ್ರ ಮಂಜರಿ

‘ತತ್ಸಮ ತದ್ಭವ’ ಫಸ್ಟ್​ ಲುಕ್​ ಹಂಚಿಕೊಂಡ ನಟಿ ಮೇಘನಾ ರಾಜ್‌

ಬೆಂಗಳೂರು : ನಟಿ ಮೇಘನಾ ರಾಜ್​ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಇಡಲಾಗಿದೆ.


ನಟಿ ಮೇಘನಾ ರಾಜ್​ ಸರ್ಜಾ ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದಿಂದ ಕುಗ್ಗಿದ್ದ ಅವರು, ಬಳಿಕ ಪುತ್ರನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಈಗ ಸಿನಿಮಾಗಾಗಿಯೂ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಮೇಘನಾ ರಾಜ್ ಅವರ ಕಮ್​ಬ್ಯಾಕ್​ ಚಿತ್ರಕ್ಕೆ ಪನ್ನಗ ಭರಣ  ಬಂಡವಾಳ ಹೂಡಲಿದ್ದಾರೆ ಹಾಗೂ ವಿಶಾಲ್​ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಒಂದಷ್ಟು ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಈಗ ಆ ಚಿತ್ರಕ್ಕೆ ಶೀರ್ಷಿಕೆ ಏನೆಂಬುದು ರಿವೀಲ್​ ಆಗಿದೆ. ‘ತತ್ಸಮ ತದ್ಭವʼ ಎಂದು ಟೈಟಲ್​ ಇಡಲಾಗಿದೆ. ಈ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಕೂಡ ಬಿಡುಗಡೆ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸುವಂತಿದೆ.

ಮೇಘನಾ ರಾಜ್​ ಸರ್ಜಾ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಾರೆ. ಈ ಬಾರಿ ಅವರು ಆಯ್ದುಕೊಂಡಿರುವ ‘ತತ್ಸಮ ತದ್ಭವ’ ಸಿನಿಮಾದ ಕತೆ ಕೂಡ ಸಖತ್​ ತೀವ್ರತೆಯಿಂದ ಕೂಡಿರುವಂತಿದೆ. ಮೇಘನಾ ಅವರ ಬಾಯಿಯನ್ನು ಯಾರೋ ಮುಚ್ಚಿರುವ ರೀತಿಯಲ್ಲಿ ಫಸ್ಟ್ ಲುಕ್​ ಪೋಸ್ಟರ್​ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿ ಭಯ ಎದ್ದು ಕಾಣಿಸುತ್ತಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್​’ ಎಂಬ ಟ್ಯಾಗ್​ ಲೈನ್​ ಕೂಡ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

13 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

13 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

13 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

13 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

13 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

14 hours ago