ಬೆಂಗಳೂರು : ನಟಿ ಮೇಘನಾ ರಾಜ್ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್’ ಎಂಬ ಟ್ಯಾಗ್ ಲೈನ್ ಇಡಲಾಗಿದೆ.
ನಟಿ ಮೇಘನಾ ರಾಜ್ ಸರ್ಜಾ ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದಿಂದ ಕುಗ್ಗಿದ್ದ ಅವರು, ಬಳಿಕ ಪುತ್ರನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಈಗ ಸಿನಿಮಾಗಾಗಿಯೂ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಮೇಘನಾ ರಾಜ್ ಅವರ ಕಮ್ಬ್ಯಾಕ್ ಚಿತ್ರಕ್ಕೆ ಪನ್ನಗ ಭರಣ ಬಂಡವಾಳ ಹೂಡಲಿದ್ದಾರೆ ಹಾಗೂ ವಿಶಾಲ್ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಒಂದಷ್ಟು ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಈಗ ಆ ಚಿತ್ರಕ್ಕೆ ಶೀರ್ಷಿಕೆ ಏನೆಂಬುದು ರಿವೀಲ್ ಆಗಿದೆ. ‘ತತ್ಸಮ ತದ್ಭವʼ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸುವಂತಿದೆ.
ಮೇಘನಾ ರಾಜ್ ಸರ್ಜಾ ಅವರು ಸ್ಕ್ರಿಪ್ಟ್ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಾರೆ. ಈ ಬಾರಿ ಅವರು ಆಯ್ದುಕೊಂಡಿರುವ ‘ತತ್ಸಮ ತದ್ಭವ’ ಸಿನಿಮಾದ ಕತೆ ಕೂಡ ಸಖತ್ ತೀವ್ರತೆಯಿಂದ ಕೂಡಿರುವಂತಿದೆ. ಮೇಘನಾ ಅವರ ಬಾಯಿಯನ್ನು ಯಾರೋ ಮುಚ್ಚಿರುವ ರೀತಿಯಲ್ಲಿ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿ ಭಯ ಎದ್ದು ಕಾಣಿಸುತ್ತಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್’ ಎಂಬ ಟ್ಯಾಗ್ ಲೈನ್ ಕೂಡ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…
ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…
ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…