ಮುಂಬೈ: ಸಂಘರ್ಷ ಪೀಡಿತ ಇಸ್ರೇಲ್ ನಲ್ಲಿ ಸಿಲುಕಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಕೊನೆಗೂ ಭಾರತಕ್ಕೆ ಮರಳಿದ್ದಾರೆ. ಭಾನುವಾರ ಸಂಜೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಮನೆಗೆ ತೆರಳಿದ್ದಾರೆ.
ಹೈಫಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಇಸ್ರೇಲ್ ಗೆ ತೆರಳಿದ್ದರು. ಆದರೆ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಅವರು ಅಲ್ಲಿ ಸಿಲುಕಿಕೊಂಡಿದ್ದರು.
https://x.com/ANI/status/1710958462342209957?s=20
ಇದಕ್ಕೂ ಮುನ್ನಾ ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ನುಶ್ರತ್ ಭರುಚ್ಚ ತಂಡದ ಸದಸ್ಯೆ ಸಂಚಿತಾ ತ್ರಿವೇದಿ, ನುಶ್ರತ್ ಅವರೊಂದಿಗೆ ಸಂಪರ್ಕದಲ್ಲಿದ್ದು, ರಾಯಭಾರ ಕಚೇರಿಯ ಸಹಾಯದಿಂದ ಸುರಕ್ಷಿತವಾಗಿ ಮನೆಗೆ ಕರೆತರಲಾಗುತ್ತಿದೆ. ನಮಗೆ ನೇರ ವಿಮಾನ ಸಿಗಲಿಲ್ಲ ಆದ್ದರಿಂದ ಅವರು ಸಂಪರ್ಕ ವಿಮಾನದಲ್ಲಿ ಮುಂಬೈನತ್ತ ಹೊರಟಿದ್ದಾರೆ. ಅವರು ಸುರಕ್ಷಿತವಾಗಿದ್ದು, ಭಾರತದತ್ತ ಹೊರಟಿರುವುದಾಗಿ ತಿಳಿಸಿದರು.
ಸಂಘರ್ಷದ ಕುರಿತು ಮಾತನಾಡಿದ ಅವರು ಶನಿವಾರ ಬೆಳಿಗ್ಗೆ 6:30 ರ ಸುಮಾರಿಗೆ (ಸ್ಥಳೀಯ ಕಾಲಮಾನ), ಗಾಜಾದಿಂದ ಇಸ್ರೇಲ್ಗೆ ರಾಕೆಟ್ ಗುಂಡಿನ ಸುರಿಮಳೆ ಪ್ರಾರಂಭವಾಯಿತು, ಟೆಲ್ ಅವಿವ್, ರೆಹೋವೊಟ್, ಗೆಡೆರಾ ಮತ್ತು ಅಶ್ಕೆಲೋನ್ ಸೇರಿದಂತೆ ಹಲವಾರು ನಗರಗಳ ಮೇಲೆ ದಾಳಿ ನಡೆದಿದ್ದು, ಗಾಜಾದಿಂದ ಅನೇಕ ಹಮಾಸ್ ಉಗ್ರರು ಇಸ್ರೋಲ್ ಪ್ರವೇಶಿಸಿದರು ಎಂದು ತಿಳಿಸಿದರು.
ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಯಿಂದ ಸಾವಿನ ಸಂಖ್ಯೆ ಮೃತಪಟ್ಟವರ ಸಂಖ್ಯೆ 300 ದಾಟಿದೆ ಮತ್ತು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. 1,590 ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಧ್ಯಮಗಳ ವರದಿಗಳು ಹೇಳಿವೆ.
ನುಶ್ರತ್ ಇತ್ತೀಚೆಗೆ ಕಳೆದ ತಿಂಗಳು ಬಿಡುಗಡೆಯಾದ ‘ಅಕೇಲಿ’ ಚಿತ್ರದಲ್ಲಿ ಕಾಣಿಸಿಕೊಂಡರು. ಈ ಚಲನಚಿತ್ರವು ಯುದ್ಧ ಪೀಡಿತ ಇರಾಕ್ನಲ್ಲಿ ಸಿಲುಕಿರುವ ಭಾರತೀಯ ಮಹಿಳೆ ಹಾಗೂ ಬದುಕಿಗಾಗಿ ಆಕೆ ನಡೆಸುವ ಹೋರಾಟದ ಕಥಾ ಹಂದರ ಹೊಂದಿದೆ. ‘ಅಕೆಲ್ಲಿ’ ಚಿತ್ರವನ್ನು ಪ್ರಣಯ್ ಮೇಶ್ರಾಮ್ ಅವರು ನಿರ್ದೇಶಿಸಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…