ಚಿತ್ರ ಮಂಜರಿ

ಇಸ್ರೇಲ್‌ನಿಂದ ಮುಂಬೈಗೆ ಮರಳಿದ ನಟಿ ನುಶ್ರತ್ ಭರುಚ್ಚಾ!

ಮುಂಬೈ: ಸಂಘರ್ಷ ಪೀಡಿತ ಇಸ್ರೇಲ್ ನಲ್ಲಿ ಸಿಲುಕಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಕೊನೆಗೂ ಭಾರತಕ್ಕೆ ಮರಳಿದ್ದಾರೆ. ಭಾನುವಾರ ಸಂಜೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಮನೆಗೆ ತೆರಳಿದ್ದಾರೆ.

ಹೈಫಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಇಸ್ರೇಲ್ ಗೆ ತೆರಳಿದ್ದರು.  ಆದರೆ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಅವರು ಅಲ್ಲಿ ಸಿಲುಕಿಕೊಂಡಿದ್ದರು.

https://x.com/ANI/status/1710958462342209957?s=20

ಇದಕ್ಕೂ ಮುನ್ನಾ ಎಎನ್ ಐ ಸುದ್ದಿಸಂಸ್ಥೆಯೊಂದಿಗೆ  ಮಾತನಾಡಿದ  ನುಶ್ರತ್ ಭರುಚ್ಚ ತಂಡದ ಸದಸ್ಯೆ ಸಂಚಿತಾ ತ್ರಿವೇದಿ, ನುಶ್ರತ್ ಅವರೊಂದಿಗೆ ಸಂಪರ್ಕದಲ್ಲಿದ್ದು, ರಾಯಭಾರ ಕಚೇರಿಯ ಸಹಾಯದಿಂದ  ಸುರಕ್ಷಿತವಾಗಿ ಮನೆಗೆ ಕರೆತರಲಾಗುತ್ತಿದೆ.  ನಮಗೆ ನೇರ ವಿಮಾನ ಸಿಗಲಿಲ್ಲ ಆದ್ದರಿಂದ  ಅವರು ಸಂಪರ್ಕ ವಿಮಾನದಲ್ಲಿ ಮುಂಬೈನತ್ತ ಹೊರಟಿದ್ದಾರೆ.  ಅವರು ಸುರಕ್ಷಿತವಾಗಿದ್ದು, ಭಾರತದತ್ತ ಹೊರಟಿರುವುದಾಗಿ ತಿಳಿಸಿದರು.

ಸಂಘರ್ಷದ ಕುರಿತು ಮಾತನಾಡಿದ ಅವರು ಶನಿವಾರ ಬೆಳಿಗ್ಗೆ 6:30 ರ ಸುಮಾರಿಗೆ (ಸ್ಥಳೀಯ ಕಾಲಮಾನ), ಗಾಜಾದಿಂದ ಇಸ್ರೇಲ್‌ಗೆ ರಾಕೆಟ್ ಗುಂಡಿನ ಸುರಿಮಳೆ ಪ್ರಾರಂಭವಾಯಿತು, ಟೆಲ್ ಅವಿವ್, ರೆಹೋವೊಟ್, ಗೆಡೆರಾ ಮತ್ತು ಅಶ್ಕೆಲೋನ್ ಸೇರಿದಂತೆ ಹಲವಾರು ನಗರಗಳ ಮೇಲೆ ದಾಳಿ ನಡೆದಿದ್ದು, ಗಾಜಾದಿಂದ ಅನೇಕ ಹಮಾಸ್ ಉಗ್ರರು ಇಸ್ರೋಲ್ ಪ್ರವೇಶಿಸಿದರು ಎಂದು ತಿಳಿಸಿದರು.

ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಯಿಂದ ಸಾವಿನ ಸಂಖ್ಯೆ ಮೃತಪಟ್ಟವರ ಸಂಖ್ಯೆ  300 ದಾಟಿದೆ ಮತ್ತು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. 1,590 ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಧ್ಯಮಗಳ ವರದಿಗಳು ಹೇಳಿವೆ.

ನುಶ್ರತ್ ಇತ್ತೀಚೆಗೆ ಕಳೆದ ತಿಂಗಳು ಬಿಡುಗಡೆಯಾದ ‘ಅಕೇಲಿ’ ಚಿತ್ರದಲ್ಲಿ ಕಾಣಿಸಿಕೊಂಡರು. ಈ ಚಲನಚಿತ್ರವು ಯುದ್ಧ ಪೀಡಿತ ಇರಾಕ್‌ನಲ್ಲಿ ಸಿಲುಕಿರುವ ಭಾರತೀಯ ಮಹಿಳೆ ಹಾಗೂ ಬದುಕಿಗಾಗಿ ಆಕೆ ನಡೆಸುವ ಹೋರಾಟದ ಕಥಾ ಹಂದರ ಹೊಂದಿದೆ. ‘ಅಕೆಲ್ಲಿ’ ಚಿತ್ರವನ್ನು ಪ್ರಣಯ್ ಮೇಶ್ರಾಮ್ ಅವರು ನಿರ್ದೇಶಿಸಿದ್ದಾರೆ.

andolanait

Recent Posts

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

12 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

1 hour ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

5 hours ago