ಚಿತ್ರ ಮಂಜರಿ

ಇಸ್ರೇಲ್ ನಲ್ಲಿ ಸಿಲುಕಿದ್ದ ನಟಿ ನುಶ್ರತ್ ಸುರಕ್ಷಿತ: ಭಾರತೀಯ ರಾಯಭಾರ ಕಚೇರಿ ನೆರವು

ಮುಂಬೈ: ಹಮಾಸ್‌ನ ಮಾರಣಾಂತಿಕ ದಾಳಿ ಮತ್ತು ದೇಶದ ರಕ್ಷಣಾ ಪಡೆಗಳ ಪ್ರತೀಕಾರದ ವೈಮಾನಿಕ ದಾಳಿಯ ನಡುವೆ ಇಸ್ರೇಲ್‌ನಲ್ಲಿ ಸಿಕ್ಕಿಬಿದ್ದಿದ್ದ ನಟಿ ನುಶ್ರತ್ ಭರುಚ್ಚಾ ಈಗ ಭಾರತೀಯ ರಾಯಭಾರಿ ಕಚೇರಿಯ ನೆರವಿನೊಂದಿಗೆ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗುವ ಪ್ರಕ್ರಿಯೆಯಲ್ಲಿದ್ದಾರೆ.

“ನುಶ್ರುತ್ ಅವರು ಸುರಕ್ಷಿತವಾಗಿದ್ದು, ಯಶಸ್ವಿಯಾಗಿ ಅವರು ವಾಪಸ್ ಆಗಲಿದ್ದಾರೆ. ರಾಯಭಾರ ಕಚೇರಿಯ ಸಹಾಯದಿಂದ ಆಕೆಯನ್ನು ಸುರಕ್ಷಿತವಾಗಿ ಮನೆಗೆ ಕರೆತರಲಾಗುತ್ತಿದೆ. ನಮಗೆ ನೇರ ವಿಮಾನ ಸಿಗಲಿಲ್ಲ, ಆದ್ದರಿಂದ ಅವರು ಸಂಪರ್ಕ ವಿಮಾನದಿಂದ ಭಾರತಕ್ಕೆ ಹಿಂತಿರುಗಿದ್ದಾರೆ. ಅವರು ಭಾರತಕ್ಕೆ ಬಂದಿಳಿದ ತಕ್ಷಣ ನಾವು ನಿಮಗೆ ತಿಳಿಸುತ್ತೇವೆ ಎಂದು ನುಶ್ರತ್ ಅವರ ಪ್ರಚಾರಕರಾದ ಸಂಚಿತಾ ತ್ರಿವೇದಿ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

“ನುಶ್ರತ್‌ ಭರುಚ್ಚಾ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿದ್ದಾಳೆ. ಅವಳ ಜತೆ ಮಾತನಾಡಿದ್ದೇನೆ. ಟೆಲ್‌ಅವಿವ್‌ನಿಂದ ಅವಳು ಮುಂಬೈಗೆ ಆಗಮಿಸಲಿದ್ದಾಳೆ. ಅವಳು ಸುರಕ್ಷಿತವಾಗಿರುವುದು ಸಮಾಧಾನ ತಂದಿದೆ. ಟೆಲ್‌ಅವಿವ್‌ನಿಂದ ದುಬೈಗೆ ತೆರಳಿ, ಅಲ್ಲಿಂದ ಮುಂಬೈಗೆ ಆಗಮಿಸಲಿದ್ದಾಳೆ” ಎಂದು ನುಶ್ರತ್‌ ಭರುಚ್ಚಾ ಅವರ ತಾಯಿ ತಸ್ನೀಮ್‌ ಭರುಚ್ಚಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದರಿಂದ ನುಶ್ರತ್‌ ಭರುಚ್ಚಾ ಅಭಿಮಾನಿಗಳು ನಿಟ್ಟುಸಿರುವ ಬಿಟ್ಟಿದ್ದಾರೆ.

ಇಸ್ರೇಲ್‌ನಲ್ಲಿ ನಿನ್ನೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ನಟಿ ನುಶ್ರತ್‌ ಭರುಚ್ಚಾ ಅವರು ಮೊಬೈಲ್‌ ಸಂಪರ್ಕ ಕಳೆದುಕೊಂಡಿದ್ದರು. “ನುಶ್ರತ್‌ ಭರುಚ್ಚಾ ಅವರು ಹೈಫಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ನಾವು ಅವರ ಜತೆ ಮಾತನಾಡಿದ್ದೆವು. ಆದರೆ, ಉಗ್ರರ ದಾಳಿಯ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಫೋನ್‌ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಹಾಗಾಗಿ, ಅವರು ಇಸ್ರೇಲ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನಿಸುತ್ತಿದೆ. ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಯತ್ನಿಸಲಾಗುತ್ತಿದೆ” ಎಂದು ನಟಿಯ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದರು.

andolanait

Recent Posts

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

5 mins ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

38 mins ago

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…

51 mins ago

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್‌ ಈಶ್ವರ್‌

ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…

1 hour ago

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…

1 hour ago

ನಮಗೂ ಸಚಿವ ಸ್ಥಾನ ಕೊಡಿ: ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…

1 hour ago