ಚಿತ್ರ ಮಂಜರಿ

ಇಸ್ರೇಲ್ ನಲ್ಲಿ ಸಿಲುಕಿದ್ದ ನಟಿ ನುಶ್ರತ್ ಸುರಕ್ಷಿತ: ಭಾರತೀಯ ರಾಯಭಾರ ಕಚೇರಿ ನೆರವು

ಮುಂಬೈ: ಹಮಾಸ್‌ನ ಮಾರಣಾಂತಿಕ ದಾಳಿ ಮತ್ತು ದೇಶದ ರಕ್ಷಣಾ ಪಡೆಗಳ ಪ್ರತೀಕಾರದ ವೈಮಾನಿಕ ದಾಳಿಯ ನಡುವೆ ಇಸ್ರೇಲ್‌ನಲ್ಲಿ ಸಿಕ್ಕಿಬಿದ್ದಿದ್ದ ನಟಿ ನುಶ್ರತ್ ಭರುಚ್ಚಾ ಈಗ ಭಾರತೀಯ ರಾಯಭಾರಿ ಕಚೇರಿಯ ನೆರವಿನೊಂದಿಗೆ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗುವ ಪ್ರಕ್ರಿಯೆಯಲ್ಲಿದ್ದಾರೆ.

“ನುಶ್ರುತ್ ಅವರು ಸುರಕ್ಷಿತವಾಗಿದ್ದು, ಯಶಸ್ವಿಯಾಗಿ ಅವರು ವಾಪಸ್ ಆಗಲಿದ್ದಾರೆ. ರಾಯಭಾರ ಕಚೇರಿಯ ಸಹಾಯದಿಂದ ಆಕೆಯನ್ನು ಸುರಕ್ಷಿತವಾಗಿ ಮನೆಗೆ ಕರೆತರಲಾಗುತ್ತಿದೆ. ನಮಗೆ ನೇರ ವಿಮಾನ ಸಿಗಲಿಲ್ಲ, ಆದ್ದರಿಂದ ಅವರು ಸಂಪರ್ಕ ವಿಮಾನದಿಂದ ಭಾರತಕ್ಕೆ ಹಿಂತಿರುಗಿದ್ದಾರೆ. ಅವರು ಭಾರತಕ್ಕೆ ಬಂದಿಳಿದ ತಕ್ಷಣ ನಾವು ನಿಮಗೆ ತಿಳಿಸುತ್ತೇವೆ ಎಂದು ನುಶ್ರತ್ ಅವರ ಪ್ರಚಾರಕರಾದ ಸಂಚಿತಾ ತ್ರಿವೇದಿ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

“ನುಶ್ರತ್‌ ಭರುಚ್ಚಾ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿದ್ದಾಳೆ. ಅವಳ ಜತೆ ಮಾತನಾಡಿದ್ದೇನೆ. ಟೆಲ್‌ಅವಿವ್‌ನಿಂದ ಅವಳು ಮುಂಬೈಗೆ ಆಗಮಿಸಲಿದ್ದಾಳೆ. ಅವಳು ಸುರಕ್ಷಿತವಾಗಿರುವುದು ಸಮಾಧಾನ ತಂದಿದೆ. ಟೆಲ್‌ಅವಿವ್‌ನಿಂದ ದುಬೈಗೆ ತೆರಳಿ, ಅಲ್ಲಿಂದ ಮುಂಬೈಗೆ ಆಗಮಿಸಲಿದ್ದಾಳೆ” ಎಂದು ನುಶ್ರತ್‌ ಭರುಚ್ಚಾ ಅವರ ತಾಯಿ ತಸ್ನೀಮ್‌ ಭರುಚ್ಚಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದರಿಂದ ನುಶ್ರತ್‌ ಭರುಚ್ಚಾ ಅಭಿಮಾನಿಗಳು ನಿಟ್ಟುಸಿರುವ ಬಿಟ್ಟಿದ್ದಾರೆ.

ಇಸ್ರೇಲ್‌ನಲ್ಲಿ ನಿನ್ನೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ನಟಿ ನುಶ್ರತ್‌ ಭರುಚ್ಚಾ ಅವರು ಮೊಬೈಲ್‌ ಸಂಪರ್ಕ ಕಳೆದುಕೊಂಡಿದ್ದರು. “ನುಶ್ರತ್‌ ಭರುಚ್ಚಾ ಅವರು ಹೈಫಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ನಾವು ಅವರ ಜತೆ ಮಾತನಾಡಿದ್ದೆವು. ಆದರೆ, ಉಗ್ರರ ದಾಳಿಯ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಫೋನ್‌ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಹಾಗಾಗಿ, ಅವರು ಇಸ್ರೇಲ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನಿಸುತ್ತಿದೆ. ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಯತ್ನಿಸಲಾಗುತ್ತಿದೆ” ಎಂದು ನಟಿಯ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago