ಚಿತ್ರ ಮಂಜರಿ

ಇಸ್ರೇಲ್ ನಲ್ಲಿ ಸಿಲುಕಿದ್ದ ನಟಿ ನುಶ್ರತ್ ಸುರಕ್ಷಿತ: ಭಾರತೀಯ ರಾಯಭಾರ ಕಚೇರಿ ನೆರವು

ಮುಂಬೈ: ಹಮಾಸ್‌ನ ಮಾರಣಾಂತಿಕ ದಾಳಿ ಮತ್ತು ದೇಶದ ರಕ್ಷಣಾ ಪಡೆಗಳ ಪ್ರತೀಕಾರದ ವೈಮಾನಿಕ ದಾಳಿಯ ನಡುವೆ ಇಸ್ರೇಲ್‌ನಲ್ಲಿ ಸಿಕ್ಕಿಬಿದ್ದಿದ್ದ ನಟಿ ನುಶ್ರತ್ ಭರುಚ್ಚಾ ಈಗ ಭಾರತೀಯ ರಾಯಭಾರಿ ಕಚೇರಿಯ ನೆರವಿನೊಂದಿಗೆ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗುವ ಪ್ರಕ್ರಿಯೆಯಲ್ಲಿದ್ದಾರೆ.

“ನುಶ್ರುತ್ ಅವರು ಸುರಕ್ಷಿತವಾಗಿದ್ದು, ಯಶಸ್ವಿಯಾಗಿ ಅವರು ವಾಪಸ್ ಆಗಲಿದ್ದಾರೆ. ರಾಯಭಾರ ಕಚೇರಿಯ ಸಹಾಯದಿಂದ ಆಕೆಯನ್ನು ಸುರಕ್ಷಿತವಾಗಿ ಮನೆಗೆ ಕರೆತರಲಾಗುತ್ತಿದೆ. ನಮಗೆ ನೇರ ವಿಮಾನ ಸಿಗಲಿಲ್ಲ, ಆದ್ದರಿಂದ ಅವರು ಸಂಪರ್ಕ ವಿಮಾನದಿಂದ ಭಾರತಕ್ಕೆ ಹಿಂತಿರುಗಿದ್ದಾರೆ. ಅವರು ಭಾರತಕ್ಕೆ ಬಂದಿಳಿದ ತಕ್ಷಣ ನಾವು ನಿಮಗೆ ತಿಳಿಸುತ್ತೇವೆ ಎಂದು ನುಶ್ರತ್ ಅವರ ಪ್ರಚಾರಕರಾದ ಸಂಚಿತಾ ತ್ರಿವೇದಿ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

“ನುಶ್ರತ್‌ ಭರುಚ್ಚಾ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿದ್ದಾಳೆ. ಅವಳ ಜತೆ ಮಾತನಾಡಿದ್ದೇನೆ. ಟೆಲ್‌ಅವಿವ್‌ನಿಂದ ಅವಳು ಮುಂಬೈಗೆ ಆಗಮಿಸಲಿದ್ದಾಳೆ. ಅವಳು ಸುರಕ್ಷಿತವಾಗಿರುವುದು ಸಮಾಧಾನ ತಂದಿದೆ. ಟೆಲ್‌ಅವಿವ್‌ನಿಂದ ದುಬೈಗೆ ತೆರಳಿ, ಅಲ್ಲಿಂದ ಮುಂಬೈಗೆ ಆಗಮಿಸಲಿದ್ದಾಳೆ” ಎಂದು ನುಶ್ರತ್‌ ಭರುಚ್ಚಾ ಅವರ ತಾಯಿ ತಸ್ನೀಮ್‌ ಭರುಚ್ಚಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದರಿಂದ ನುಶ್ರತ್‌ ಭರುಚ್ಚಾ ಅಭಿಮಾನಿಗಳು ನಿಟ್ಟುಸಿರುವ ಬಿಟ್ಟಿದ್ದಾರೆ.

ಇಸ್ರೇಲ್‌ನಲ್ಲಿ ನಿನ್ನೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ನಟಿ ನುಶ್ರತ್‌ ಭರುಚ್ಚಾ ಅವರು ಮೊಬೈಲ್‌ ಸಂಪರ್ಕ ಕಳೆದುಕೊಂಡಿದ್ದರು. “ನುಶ್ರತ್‌ ಭರುಚ್ಚಾ ಅವರು ಹೈಫಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ನಾವು ಅವರ ಜತೆ ಮಾತನಾಡಿದ್ದೆವು. ಆದರೆ, ಉಗ್ರರ ದಾಳಿಯ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಫೋನ್‌ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಹಾಗಾಗಿ, ಅವರು ಇಸ್ರೇಲ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನಿಸುತ್ತಿದೆ. ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಯತ್ನಿಸಲಾಗುತ್ತಿದೆ” ಎಂದು ನಟಿಯ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದರು.

andolanait

Recent Posts

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

20 mins ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

1 hour ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

2 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

2 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

3 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

3 hours ago