ಚಿತ್ರ ಮಂಜರಿ

ನಟಿ ರಾಖಿ ಸಾವಂತ್ ತಾಯಿ ಜಯಾ ಭೇದಾ ನಿಧನ

ಮುಂಬೈ (ಮಹಾರಾಷ್ಟ್ರ): ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ (73) ಅವರು ಶನಿವಾರ ರಾತ್ರಿ 9 ಗಂಟೆಗೆ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಬ್ರೈನ್ ಟ್ಯೂಮರ್ ಮತ್ತು ಕ್ಯಾನ್ಸರ್ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ನಿಧನರಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯರಾಗಿರುವ ರಾಖಿ ಸಾವಂತ್ ಆಗಾಗ್ಗೆ ತಮ್ಮ ತಾಯಿಯ ಆರೋಗ್ಯದ ಬಗ್ಗೆಯೂ ಮಾಹಿತಿ ಹಂಚಿಕೊಳ್ಳುತ್ತಿದ್ದರು. ಇತ್ತೀಚಿನ ಭಾವನಾತ್ಮಕ ಪೋಸ್ಟ್ ಒಂದರಲ್ಲಿ, ಅವರು ತಮ್ಮ ತಾಯಿಯ ಚೇತರಿಕೆಗೆ ಪ್ರಾರ್ಥಿಸಲು ಅಭಿಮಾನಿಗಳನ್ನು ಕೇಳಿಕೊಂಡಿದ್ದರು. ಅಲ್ಲದೇ ಇತ್ತೀಚೆಗಷ್ಟೇ ಆದಿಲ್ ಖಾನ್ ಜೊತೆಗಿನ ಮದುವೆ ಬಗ್ಗೆ ರಾಖಿ ಸಾವಂತ್​ ಸಖತ್​ ಸುದ್ದಿಯಾಗಿದ್ದರು. ಆದಿಲ್ ಅವರು ರಾಖಿ ಜೊತೆಗಿನ ಮದುವೆಯನ್ನು ಒಪ್ಪಿಕೊಂಡಿರಲಿಲ್ಲ. ನಂತರ ಅವರು ತಾವು ರಾಖಿ ಅವರೊಂದಿಗೆ ಮದುವೆ ಆಗಿರುವುದಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡರು ಮತ್ತು ಮದುವೆಯ ಚಿತ್ರವನ್ನೂ ಸಹ ಹಂಚಿಕೊಂಡಿದ್ದರು.

 

andolanait

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

1 hour ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

2 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

3 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

3 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

3 hours ago