ಚಿತ್ರ ಮಂಜರಿ

ನಟಿ ರಾಖಿ ಸಾವಂತ್ ತಾಯಿ ಜಯಾ ಭೇದಾ ನಿಧನ

ಮುಂಬೈ (ಮಹಾರಾಷ್ಟ್ರ): ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ (73) ಅವರು ಶನಿವಾರ ರಾತ್ರಿ 9 ಗಂಟೆಗೆ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಬ್ರೈನ್ ಟ್ಯೂಮರ್ ಮತ್ತು ಕ್ಯಾನ್ಸರ್ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ನಿಧನರಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯರಾಗಿರುವ ರಾಖಿ ಸಾವಂತ್ ಆಗಾಗ್ಗೆ ತಮ್ಮ ತಾಯಿಯ ಆರೋಗ್ಯದ ಬಗ್ಗೆಯೂ ಮಾಹಿತಿ ಹಂಚಿಕೊಳ್ಳುತ್ತಿದ್ದರು. ಇತ್ತೀಚಿನ ಭಾವನಾತ್ಮಕ ಪೋಸ್ಟ್ ಒಂದರಲ್ಲಿ, ಅವರು ತಮ್ಮ ತಾಯಿಯ ಚೇತರಿಕೆಗೆ ಪ್ರಾರ್ಥಿಸಲು ಅಭಿಮಾನಿಗಳನ್ನು ಕೇಳಿಕೊಂಡಿದ್ದರು. ಅಲ್ಲದೇ ಇತ್ತೀಚೆಗಷ್ಟೇ ಆದಿಲ್ ಖಾನ್ ಜೊತೆಗಿನ ಮದುವೆ ಬಗ್ಗೆ ರಾಖಿ ಸಾವಂತ್​ ಸಖತ್​ ಸುದ್ದಿಯಾಗಿದ್ದರು. ಆದಿಲ್ ಅವರು ರಾಖಿ ಜೊತೆಗಿನ ಮದುವೆಯನ್ನು ಒಪ್ಪಿಕೊಂಡಿರಲಿಲ್ಲ. ನಂತರ ಅವರು ತಾವು ರಾಖಿ ಅವರೊಂದಿಗೆ ಮದುವೆ ಆಗಿರುವುದಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡರು ಮತ್ತು ಮದುವೆಯ ಚಿತ್ರವನ್ನೂ ಸಹ ಹಂಚಿಕೊಂಡಿದ್ದರು.

 

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago