ಚಿತ್ರ ಮಂಜರಿ

ಮೈಸೂರು ಪಾಕ್‌ಗೆ ಮನಸೋತ ನಟಿ ಶಿಲ್ಪಾ ಶೆಟ್ಟಿ

ಮೈಸೂರು : ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣಕ್ಕಾಗಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಮೈಸೂರಿಗೆ ಬಂದಿಳಿದಿದ್ದಾರೆ. ಮೈಸೂರು ಸುಪ್ರಸಿದ್ಧ ಮೈಸೂರು ಪಾಕ್ ಅನ್ನು ಶಿಲ್ಪಾ ಸವಿದಿದ್ದಾರೆ. ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಮೊನ್ನೆಯಷ್ಟೇ ಧ್ರುವ ಸರ್ಜಾ ಹುಟ್ಟುಹಬ್ಬಕ್ಕಾಗಿ ‘ಕೆಡಿ’ ಸಿನಿಮಾ ತಂಡ ಚಿತ್ರದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಶುಭಾಶಯ ತಿಳಿಸಿತ್ತು. ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಧ್ರುವ ಹೊಸ ರೀತಿಯ ಪಾತ್ರವನ್ನು ಮಾಡಿದ್ದಾರೆ. ಆ ಪಾತ್ರದ ಹಿನ್ನೆಲೆಯಾಗಿಟ್ಟುಕೊಂಡು ಈ ಪೋಸ್ಟರ್ ಸಿದ್ಧ ಮಾಡಿತ್ತು ಚಿತ್ರತಂಡ.

ಕ್ರಿಯೆಟಿವ್ ಡೈರೆಕ್ಟರ್ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ `ಕೆಡಿ’ ಸಿನಿಮಾದ ಫೋಟೋವೊಂದು ಈ ಹಿಂದೆ ಲೀಕ್ ಆಗಿತ್ತು. ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಾಗ, ಆ ಭಾಗದ ಶೂಟಿಂಗ್‌ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ ನಲ್ಲಿ ಕಂಡಿದ್ದರು. ಅಭಿಮಾನಿಗಳ ಮಧ್ಯ ಧ್ರುವ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ರೆಟ್ರೋ ಲುಕ್‌ನಲ್ಲಿ ಧ್ರುವ ಸಖತ್ ಆಗಿ ಕಂಡಿದ್ದರು.

ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ರವಿಚಂದ್ರನ್ ಕೂಡ ಇದ್ದಾರೆ. ಮೊನ್ನೆಯಷ್ಟೇ ರವಿಚಂದ್ರನ್ ಅವರ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು.

ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಸಂಜಯ್ ದತ್ ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.

1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.

andolanait

Recent Posts

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

5 mins ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

24 mins ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

42 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

48 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

58 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

1 hour ago