ಚಿತ್ರ ಮಂಜರಿ

ಮೈಸೂರು ಪಾಕ್‌ಗೆ ಮನಸೋತ ನಟಿ ಶಿಲ್ಪಾ ಶೆಟ್ಟಿ

ಮೈಸೂರು : ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣಕ್ಕಾಗಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಮೈಸೂರಿಗೆ ಬಂದಿಳಿದಿದ್ದಾರೆ. ಮೈಸೂರು ಸುಪ್ರಸಿದ್ಧ ಮೈಸೂರು ಪಾಕ್ ಅನ್ನು ಶಿಲ್ಪಾ ಸವಿದಿದ್ದಾರೆ. ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಮೊನ್ನೆಯಷ್ಟೇ ಧ್ರುವ ಸರ್ಜಾ ಹುಟ್ಟುಹಬ್ಬಕ್ಕಾಗಿ ‘ಕೆಡಿ’ ಸಿನಿಮಾ ತಂಡ ಚಿತ್ರದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಶುಭಾಶಯ ತಿಳಿಸಿತ್ತು. ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಧ್ರುವ ಹೊಸ ರೀತಿಯ ಪಾತ್ರವನ್ನು ಮಾಡಿದ್ದಾರೆ. ಆ ಪಾತ್ರದ ಹಿನ್ನೆಲೆಯಾಗಿಟ್ಟುಕೊಂಡು ಈ ಪೋಸ್ಟರ್ ಸಿದ್ಧ ಮಾಡಿತ್ತು ಚಿತ್ರತಂಡ.

ಕ್ರಿಯೆಟಿವ್ ಡೈರೆಕ್ಟರ್ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ `ಕೆಡಿ’ ಸಿನಿಮಾದ ಫೋಟೋವೊಂದು ಈ ಹಿಂದೆ ಲೀಕ್ ಆಗಿತ್ತು. ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಾಗ, ಆ ಭಾಗದ ಶೂಟಿಂಗ್‌ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ ನಲ್ಲಿ ಕಂಡಿದ್ದರು. ಅಭಿಮಾನಿಗಳ ಮಧ್ಯ ಧ್ರುವ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ರೆಟ್ರೋ ಲುಕ್‌ನಲ್ಲಿ ಧ್ರುವ ಸಖತ್ ಆಗಿ ಕಂಡಿದ್ದರು.

ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ರವಿಚಂದ್ರನ್ ಕೂಡ ಇದ್ದಾರೆ. ಮೊನ್ನೆಯಷ್ಟೇ ರವಿಚಂದ್ರನ್ ಅವರ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು.

ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಸಂಜಯ್ ದತ್ ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.

1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

10 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

12 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

12 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

12 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago