ಚಿತ್ರ ಮಂಜರಿ

‘ಆದಿಪುರುಷ್​’ ಟ್ರೇಲರ್​ ಬಿಡುಗಡೆ : ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು

ಬೆಂಗಳೂರು : ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಚಿತ್ರ ಸಾಕಷ್ಟು ಸದ್ದು ಮಾಡುತ್ತಲೇ ಇತ್ತು. ಈಗ ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಜೂನ್​ 16ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಇಂದು ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಮಾಡುವ ಮೂಲಕ ಕೌತುಕ ಹೆಚ್ಚಿಸಲಾಗಿದೆ. ರಾಮಾಯಣವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ.
ರಾಮನಾಗಿ ಪ್ರಭಾಸ್​, ಸೀತೆಯಾಗಿ ಕೃತಿ ಸನೋನ್​, ರಾವಣನಾಗಿ ಸೈಫ್​ ಅಲಿ ಖಾನ್​, ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸುತ್ತಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.
‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ತೆರೆಕಾಣಲಿದೆ. ಮೊದಲ ದಿನ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.
lokesh

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

5 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

5 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

5 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

5 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

6 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

6 hours ago