ಚಿತ್ರ ಮಂಜರಿ

‘ಆದಿಪುರುಷ್​’ ಟ್ರೇಲರ್​ ಬಿಡುಗಡೆ : ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು

ಬೆಂಗಳೂರು : ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಚಿತ್ರ ಸಾಕಷ್ಟು ಸದ್ದು ಮಾಡುತ್ತಲೇ ಇತ್ತು. ಈಗ ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಜೂನ್​ 16ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಇಂದು ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಮಾಡುವ ಮೂಲಕ ಕೌತುಕ ಹೆಚ್ಚಿಸಲಾಗಿದೆ. ರಾಮಾಯಣವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ.
ರಾಮನಾಗಿ ಪ್ರಭಾಸ್​, ಸೀತೆಯಾಗಿ ಕೃತಿ ಸನೋನ್​, ರಾವಣನಾಗಿ ಸೈಫ್​ ಅಲಿ ಖಾನ್​, ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸುತ್ತಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.
‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ತೆರೆಕಾಣಲಿದೆ. ಮೊದಲ ದಿನ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.
lokesh

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

4 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

7 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

8 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

10 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

13 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

13 hours ago