ಚಿತ್ರ ಮಂಜರಿ

ಅಕ್ಷಯ್‌ ಕುಮಾರ್‌ಗೆ ಕಪಾಳಮೋಕ್ಷ ಮಾಡಿ 10 ಲಕ್ಷ ರೂ. ಬಹುಮಾನ ಗೆಲ್ಲಿ : ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಸಂಘಟನೆ

ಅಕ್ಷಯ್ ಕುಮಾರ್ ಅವರು OMG 2 ಚಿತ್ರದಲ್ಲಿ ಶಿವನ ಮೆಸೆಂಜರ್‌ ಪಾತ್ರ ಮಾಡಿದ್ದಾರೆ. ಅಲ್ಲದೆ, ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಕುರಿತ ಅಂಶ ಚಿತ್ರದಲ್ಲಿದೆ. ಈ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಬಾಲಿವುಡ್ ನಟನ ಮೇಲೆ ಕಪಾಳಮೋಕ್ಷ ಅಥವಾ ಉಗುಳುವ ಯಾರಿಗಾದರೂ ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಸಂಘಟನೆ 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ಬಾಲಿವುಡ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ ಅವರ OMG 2 ಬಾಲಿವುಡ್‌ ಚಿತ್ರ ಶುಕ್ರವಾರ ಬಿಡುಗಡೆಯಾಗಿದೆ. ಆದರೆ, ಈ ಚಿತ್ರಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಬಾಲಿವುಡ್ ನಟನ ಮೇಲೆ ಕಪಾಳಮೋಕ್ಷ ಅಥವಾ ಉಗುಳುವ ಯಾರಿಗಾದರೂ ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಸಂಘಟನೆ ಬಹುಮಾನವನ್ನು ಘೋಷಿಸಿದೆ.

ಅಕ್ಷಯ್ ಕುಮಾರ್ ಅವರು OMG 2 ಚಿತ್ರದಲ್ಲಿ ಶಿವನ ಮೆಸೆಂಜರ್‌ ಪಾತ್ರ ಮಾಡಿದ್ದಾರೆ. ಅಲ್ಲದೆ, ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಕುರಿತ ಅಂಶ ಚಿತ್ರದಲ್ಲಿದೆ. ಈ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಬಾಲಿವುಡ್ ನಟನ ಮೇಲೆ ಕಪಾಳಮೋಕ್ಷ ಅಥವಾ ಉಗುಳುವ ಯಾರಿಗಾದರೂ ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಸಂಘಟನೆ 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ಡ್ರೆಡ್‌ಲಾಕ್‌ ಮತ್ತು ಬೂಟುಗಳೊಂದಿಗೆ ಅಕ್ಷಯ್‌ ಕುಮಾರ್‌ ಅವರ ಲುಕ್‌, ಕಚೋರಿಗಳನ್ನು ಖರೀದಿಸುವುದು ಮತ್ತು ಕೊಳಕು ಕೊಳದಲ್ಲಿ ಸ್ನಾನ ಮಾಡುವ ಬಗ್ಗೆ ಅವರು ವಿಶೇಷವಾಗಿ ಅಸಮಾಧಾನಗೊಂಡಿದ್ದಾರೆ ಎಂದು ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಅಧ್ಯಕ್ಷ ಗೋವಿಂದ್ ಪರಾಶರ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಇದು ಶಿವನ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಎಂದೂ ಅವರು ಹೇಳಿದ್ದಾರೆ. ಹಾಗೂ, ಸೆನ್ಸಾರ್ ಮಂಡಳಿ ಮತ್ತು ಕೇಂದ್ರ ಸರ್ಕಾರದಿಂದ ಚಿತ್ರವನ್ನು ನಿಷೇಧಿಸುವಂತೆ ಸಂಘಟನೆಯು ಒತ್ತಾಯಿಸಿದೆ ಎಂದೂ ವರದಿಯು ಸೂಚಿಸುತ್ತದೆ.

ಈ ಮದ್ಯೆ, OMG 2 ಬಿಡುಗಡೆಯಾದ ಮೊದಲ ದಿನದಂದು ಬಾಕ್ಸ್ ಆಫೀಸ್‌ನಲ್ಲಿ 10.26 ಕೋಟಿ ರೂ. ಗಳಿಕೆ ಮಾಡಿದೆ. ಅದೇ ದಿನ ಬಿಡುಗಡೆಯಾದ ಸನ್ನಿ ಡಿಯೋಲ್‌ನ Gadar 2 ಚಿತ್ರ 40 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ. OMG 2 ನಲ್ಲಿ ಪಂಕಜ್ ತ್ರಿಪಾಠಿ ಮತ್ತು ಯಾಮಿ ಗೌತಮ್ ಕೂಡ ನಟಿಸಿದ್ದಾರೆ. ಇದು ಭಾರತೀಯ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಸುತ್ತ ಸುತ್ತುವ ತನ್ನ ಕಥಾವಸ್ತು ಹೊಂದಿರುವ ಹಿನ್ನೆಲೆ ವಿವಾದಗಳನ್ನು ಉಂಟುಮಾಡಿದೆ. ಇನ್ನು, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಅದಕ್ಕೆ ವಯಸ್ಕರಿಗೆ ಮಾತ್ರ ಅಂದರೆ A ಪ್ರಮಾಣಪತ್ರ ನೀಡಿದೆ.

ಅಮಿತ್ ರೈ ನಿರ್ದೇಶಿಸಿದ ಈ ಚಿತ್ರವು ಸಾಮಾನ್ಯ ಮನುಷ್ಯನ ಕಥೆಯನ್ನು ಅನುಸರಿಸುತ್ತದೆ. ತಂದೆ ಕಾಂತಿ ಶರಣ್ ಮುದ್ಗಲ್ ನಂಬಿಕೆಯ ಕುಟುಂಬದ ವ್ಯಕ್ತಿ, ಅವರು ತಮ್ಮ ಪ್ರೀತಿಯ ಮಗನನ್ನು ರಕ್ಷಿಸಲು ವ್ಯವಸ್ಥೆಯನ್ನು ಎದುರು ಹಾಕಿಕೊಳ್ಳುತ್ತಾರೆ. ಅಕ್ಷಯ್ ಕುಮಾರ್ ಅವರ ಪಾತ್ರ, ಶಿವನು ಕಷ್ಟದ ಸಮಯದಲ್ಲಿ ಅವರಿಗೆ ಮಾರ್ಗದರ್ಶನ ನೀಡುತ್ತಾರೆ ಮತ್ತು ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ಅವರ ಮಾರ್ಗದರ್ಶಕನಾಗಿ ನಿರ್ವಹಿಸುತ್ತಾರೆ ಎಂದು ತಿಳಿದುಬಂದಿದೆ.

lokesh

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago