ಚಿತ್ರ ಮಂಜರಿ

ಅಕ್ಷಯ್ ಕುಮಾರ್ ನಟನೆಯ ಮರಾಠಿ ಚಿತ್ರದ ಫಸ್ಟ್ ಲುಕ್ ರಿಲೀಸ್

ಬಾಲಿವುಡ್ ಖ್ಯಾತ ನಟ  ಅಕ್ಷಯ್ ಕುಮಾರ್, ಇದೀಗ ಮತ್ತೊಂದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮರಾಠಿ ಸಿನಿಮಾ ರಂಗಕ್ಕೆ ಹಾರಿದ್ದು, ಅಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವಾಜಿ ಮಹಾರಾಜ್ ಪಾತ್ರವನ್ನು ಅವರು ನಿರ್ವಹಿಸಲಿದ್ದು, ಇದು ಶಿವಾಜಿ ಜೀವನವನ್ನು ಆಧರಿಸಿದ ಸಿನಿಮಾವಾಗಿದೆ. ಈ ಚಿತ್ರಕ್ಕೆ ‘ವೇಡಾತ್ ಮರಾಠೆ ವೀರ್ ದೌಡಲೆ ಸಾತ್’ ಎಂದು ಹೆಸರು ಇಡಲಾಗಿದ್ದು, ಈ ಸಿನಿಮಾದ ಫಸ್ಟ್ ಲುಕ್ ನಿನ್ನೆ ಬಿಡುಗಡೆಯಾಗಿದೆ.


ಇತ್ತೀಚೆಗಷ್ಟೇ ರಿಲೀಸ್ ಆದ, ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ತಂದುಕೊಡಲಿಲ್ಲ. ಈ ಹಿಂದಿನ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ ಗೆಲ್ಲುವಲ್ಲಿ ವಿಫಲವಾದವು. ಈ ಕಾರಣದಿಂದಾಗಿಯೇ ಅವರು ಮರಾಠಿ ಸಿನಿಮಾ ರಂಗದತ್ತ ಹೊರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮೊದಲ ಪ್ರಯತ್ನದಲ್ಲೇ ಅವರು ಮರಾಠ ಸಾಮ್ರಾಜ್ಯದ ದೊರೆ ಆಗಿದ್ದ ಛತ್ರಪತಿ ಶಿವಾಜಿ ಅವರ ಜೀವನವನ್ನು ಆಧರಿಸಿದ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುತ್ತವೆ ಮೂಲಗಳು.

ಈ ಸಿನಿಮಾವನ್ನು ಮಹೇಶ್ ಮಂಜರೇಕರ್ ನಿರ್ದೇಶನ ಮಾಡುತ್ತಿದ್ದು, ವಸೀಮ್ ಖುರೇಷಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾದ ಮುಹೂರ್ತ ಕೂಡ ಆಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮತ್ತೊಂದು ವಿಶೇಷ ಅಂದರೆ, ಇದೇ ಕಾರ್ಯಕ್ರಮದಲ್ಲಿ ಎಂ.ಎನ್.ಸಿ ಮುಖ್ಯಸ್ಥ ರಾಜ್ ಠಾಕ್ರೆ ಕೂಡ ಭಾಗಿಯಾಗಿ, ಏಕನಾಥ್ ಶಿಂಧೆಗೆ ಮುಖಾಮುಖಿ ಆಗಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago