ಚಿತ್ರ ಮಂಜರಿ

ಆಲಿಯಾ ಭಟ್‌ಗೂ ತಟ್ಟಿದ ಡೀಪ್‌ ಫೇಕ್‌ ಬಿಸಿ

ಇತ್ತೀಚೆಗೆ ಡೀಪ್‌ ಫೇಕ್‌ ತಂತ್ರಜ್ಙಾನದ ಹಾವಳಿ ಹೆಚ್ಚಾಗಿದೆ. ಕೆಲದಿನಗಳ ನಟಿ ರಶ್ಮಿಕಾ ಮಂದಣ್ಣ, ಕಾಜೊಲ್‌, ಅವರ ಡೀಪ್‌ ಫೇಕ್ ವಿಡಿಯೋ ಸಖತ್‌ ವೈರಲ್‌ ಆಗಿ ಸಂಚಲನ ಸೃಷ್ಟಿಸಿತ್ತು. ಇದೀಗ ನಟಿ ಆಲಿಯಾ ಭಟ್‌ ಅವರಿಗೂ ಕೂಡ ಡೀಪ್‌ ಫೇಕ್‌ ಸಂಕಷ್ಟ ಎದುರಾಗಿದೆ.

ಅರೆಬರೆ ಬಟ್ಟೆ ಧರಿಸಿರುವ ಯುವತಿಯ ದೇಹಕ್ಕೆ ಡೀಪ್‌ ಫೇಕ್‌ ತಂತ್ರಜ್ಙಾನ ಬಳಸಿ ನಟಿ ಆಲಿಯಾ ಭಟ್‌ ಅವರ ಮುಖವನ್ನು ಅಂಟಿಸಿ ವೈರಲ್‌ ಮಾಡಲಾಗಿದೆ.

ಡೀಪ್‌ ಫೇಕ್‌ ವಿಡಿಯೋಗಳು ವೈರಲ್‌ ಆಗುತ್ತಿದ್ದಂತೆ ಸೈಬರ್‌ ಕ್ರೈಂ ತಂಡ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೂ ಕೂಡ ಡೀಪ್‌ ಫೇಕ್‌ ಹಾವಳಿ ನಿಂತಿಲ್ಲ.

ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರು ತುಂಡುಡುಗೆ ಧರಿಸಿ ಲಿಫ್ಟ್‌ ಪ್ರವೇಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಸಲಿಗೆ ಜರಾ ಪಟೇಲ್‌ ಎಂಬ ಯುವತಿಯ ವಿಡಿಯೋಗೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಮಾರ್ಪ್‌ ಮಾಡಲಾಗಿತ್ತು. ಈ ಕುರಿತು ಪತ್ರಕರ್ತ ಅಮಿತ್‌ ಫ್ಯಾಕ್ಟ್‌ ಚೆಕ್‌ ಮಾಡಿ ಇದು ಡೀಪ್‌ ಫೇಕ್‌ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದರು.

ಇದೇ ರೀತಿ ಯುವತ್ತಿಯೊಬ್ಬರು ಬಟ್ಟೆ ಬದಲಿಸುತ್ತಿರುವ ವಿಡಿಯೋವೊಂದಕ್ಕೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ ಬಿ ಟೌನ್ ನ ಕೃಷ್ಣ ಸುಂದರಿ ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿತ್ತು.

ಅಸಲಿಗೆ ಈ ವಿಡಿಯೋವನ್ನು ಜೂನ್ 5 ರಂದು ಟಿಕ್ ಟಾಕ್ ನಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಒಬ್ಬರು, ಗೆಟ್ ರೆಡಿ ವಿತ್ ಮಿ ಟ್ರೆಂಡ್ ಅಡಿಯಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ವಿಡಿಯೋದಲ್ಲಿರುವ ಯುವತಿಯ ಮುಖಕ್ಕೆ ನಟಿ ಕಾಜೋಲ್ ಅವರ ಮುಖವನ್ನು ಜೋಡಿಸಲಾಗಿದೆ ಎಂದು ಪ್ಯಾಕ್ಟ್ ಚೆಕ್ ಮಾಡುವ ಬೂಮ್ ವರದಿ ಮಾಡಿತ್ತು.

lokesh

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

11 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

12 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

12 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

12 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

12 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

12 hours ago