ಚಿತ್ರ ಮಂಜರಿ

ಆಲಿಯಾ ಭಟ್‌ಗೂ ತಟ್ಟಿದ ಡೀಪ್‌ ಫೇಕ್‌ ಬಿಸಿ

ಇತ್ತೀಚೆಗೆ ಡೀಪ್‌ ಫೇಕ್‌ ತಂತ್ರಜ್ಙಾನದ ಹಾವಳಿ ಹೆಚ್ಚಾಗಿದೆ. ಕೆಲದಿನಗಳ ನಟಿ ರಶ್ಮಿಕಾ ಮಂದಣ್ಣ, ಕಾಜೊಲ್‌, ಅವರ ಡೀಪ್‌ ಫೇಕ್ ವಿಡಿಯೋ ಸಖತ್‌ ವೈರಲ್‌ ಆಗಿ ಸಂಚಲನ ಸೃಷ್ಟಿಸಿತ್ತು. ಇದೀಗ ನಟಿ ಆಲಿಯಾ ಭಟ್‌ ಅವರಿಗೂ ಕೂಡ ಡೀಪ್‌ ಫೇಕ್‌ ಸಂಕಷ್ಟ ಎದುರಾಗಿದೆ.

ಅರೆಬರೆ ಬಟ್ಟೆ ಧರಿಸಿರುವ ಯುವತಿಯ ದೇಹಕ್ಕೆ ಡೀಪ್‌ ಫೇಕ್‌ ತಂತ್ರಜ್ಙಾನ ಬಳಸಿ ನಟಿ ಆಲಿಯಾ ಭಟ್‌ ಅವರ ಮುಖವನ್ನು ಅಂಟಿಸಿ ವೈರಲ್‌ ಮಾಡಲಾಗಿದೆ.

ಡೀಪ್‌ ಫೇಕ್‌ ವಿಡಿಯೋಗಳು ವೈರಲ್‌ ಆಗುತ್ತಿದ್ದಂತೆ ಸೈಬರ್‌ ಕ್ರೈಂ ತಂಡ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೂ ಕೂಡ ಡೀಪ್‌ ಫೇಕ್‌ ಹಾವಳಿ ನಿಂತಿಲ್ಲ.

ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರು ತುಂಡುಡುಗೆ ಧರಿಸಿ ಲಿಫ್ಟ್‌ ಪ್ರವೇಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಸಲಿಗೆ ಜರಾ ಪಟೇಲ್‌ ಎಂಬ ಯುವತಿಯ ವಿಡಿಯೋಗೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಮಾರ್ಪ್‌ ಮಾಡಲಾಗಿತ್ತು. ಈ ಕುರಿತು ಪತ್ರಕರ್ತ ಅಮಿತ್‌ ಫ್ಯಾಕ್ಟ್‌ ಚೆಕ್‌ ಮಾಡಿ ಇದು ಡೀಪ್‌ ಫೇಕ್‌ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದರು.

ಇದೇ ರೀತಿ ಯುವತ್ತಿಯೊಬ್ಬರು ಬಟ್ಟೆ ಬದಲಿಸುತ್ತಿರುವ ವಿಡಿಯೋವೊಂದಕ್ಕೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ ಬಿ ಟೌನ್ ನ ಕೃಷ್ಣ ಸುಂದರಿ ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿತ್ತು.

ಅಸಲಿಗೆ ಈ ವಿಡಿಯೋವನ್ನು ಜೂನ್ 5 ರಂದು ಟಿಕ್ ಟಾಕ್ ನಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಒಬ್ಬರು, ಗೆಟ್ ರೆಡಿ ವಿತ್ ಮಿ ಟ್ರೆಂಡ್ ಅಡಿಯಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ವಿಡಿಯೋದಲ್ಲಿರುವ ಯುವತಿಯ ಮುಖಕ್ಕೆ ನಟಿ ಕಾಜೋಲ್ ಅವರ ಮುಖವನ್ನು ಜೋಡಿಸಲಾಗಿದೆ ಎಂದು ಪ್ಯಾಕ್ಟ್ ಚೆಕ್ ಮಾಡುವ ಬೂಮ್ ವರದಿ ಮಾಡಿತ್ತು.

lokesh

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

2 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

5 hours ago