ಚಿತ್ರ ಮಂಜರಿ

ಆಲಿಯಾ ಭಟ್‌ಗೂ ತಟ್ಟಿದ ಡೀಪ್‌ ಫೇಕ್‌ ಬಿಸಿ

ಇತ್ತೀಚೆಗೆ ಡೀಪ್‌ ಫೇಕ್‌ ತಂತ್ರಜ್ಙಾನದ ಹಾವಳಿ ಹೆಚ್ಚಾಗಿದೆ. ಕೆಲದಿನಗಳ ನಟಿ ರಶ್ಮಿಕಾ ಮಂದಣ್ಣ, ಕಾಜೊಲ್‌, ಅವರ ಡೀಪ್‌ ಫೇಕ್ ವಿಡಿಯೋ ಸಖತ್‌ ವೈರಲ್‌ ಆಗಿ ಸಂಚಲನ ಸೃಷ್ಟಿಸಿತ್ತು. ಇದೀಗ ನಟಿ ಆಲಿಯಾ ಭಟ್‌ ಅವರಿಗೂ ಕೂಡ ಡೀಪ್‌ ಫೇಕ್‌ ಸಂಕಷ್ಟ ಎದುರಾಗಿದೆ.

ಅರೆಬರೆ ಬಟ್ಟೆ ಧರಿಸಿರುವ ಯುವತಿಯ ದೇಹಕ್ಕೆ ಡೀಪ್‌ ಫೇಕ್‌ ತಂತ್ರಜ್ಙಾನ ಬಳಸಿ ನಟಿ ಆಲಿಯಾ ಭಟ್‌ ಅವರ ಮುಖವನ್ನು ಅಂಟಿಸಿ ವೈರಲ್‌ ಮಾಡಲಾಗಿದೆ.

ಡೀಪ್‌ ಫೇಕ್‌ ವಿಡಿಯೋಗಳು ವೈರಲ್‌ ಆಗುತ್ತಿದ್ದಂತೆ ಸೈಬರ್‌ ಕ್ರೈಂ ತಂಡ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೂ ಕೂಡ ಡೀಪ್‌ ಫೇಕ್‌ ಹಾವಳಿ ನಿಂತಿಲ್ಲ.

ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರು ತುಂಡುಡುಗೆ ಧರಿಸಿ ಲಿಫ್ಟ್‌ ಪ್ರವೇಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಸಲಿಗೆ ಜರಾ ಪಟೇಲ್‌ ಎಂಬ ಯುವತಿಯ ವಿಡಿಯೋಗೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಮಾರ್ಪ್‌ ಮಾಡಲಾಗಿತ್ತು. ಈ ಕುರಿತು ಪತ್ರಕರ್ತ ಅಮಿತ್‌ ಫ್ಯಾಕ್ಟ್‌ ಚೆಕ್‌ ಮಾಡಿ ಇದು ಡೀಪ್‌ ಫೇಕ್‌ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದರು.

ಇದೇ ರೀತಿ ಯುವತ್ತಿಯೊಬ್ಬರು ಬಟ್ಟೆ ಬದಲಿಸುತ್ತಿರುವ ವಿಡಿಯೋವೊಂದಕ್ಕೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ ಬಿ ಟೌನ್ ನ ಕೃಷ್ಣ ಸುಂದರಿ ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿತ್ತು.

ಅಸಲಿಗೆ ಈ ವಿಡಿಯೋವನ್ನು ಜೂನ್ 5 ರಂದು ಟಿಕ್ ಟಾಕ್ ನಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಒಬ್ಬರು, ಗೆಟ್ ರೆಡಿ ವಿತ್ ಮಿ ಟ್ರೆಂಡ್ ಅಡಿಯಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ವಿಡಿಯೋದಲ್ಲಿರುವ ಯುವತಿಯ ಮುಖಕ್ಕೆ ನಟಿ ಕಾಜೋಲ್ ಅವರ ಮುಖವನ್ನು ಜೋಡಿಸಲಾಗಿದೆ ಎಂದು ಪ್ಯಾಕ್ಟ್ ಚೆಕ್ ಮಾಡುವ ಬೂಮ್ ವರದಿ ಮಾಡಿತ್ತು.

lokesh

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

2 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

4 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

10 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

10 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

10 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

10 hours ago