ಚಿತ್ರ ಮಂಜರಿ

ಆಲಿಯಾ ಭಟ್‌ಗೂ ತಟ್ಟಿದ ಡೀಪ್‌ ಫೇಕ್‌ ಬಿಸಿ

ಇತ್ತೀಚೆಗೆ ಡೀಪ್‌ ಫೇಕ್‌ ತಂತ್ರಜ್ಙಾನದ ಹಾವಳಿ ಹೆಚ್ಚಾಗಿದೆ. ಕೆಲದಿನಗಳ ನಟಿ ರಶ್ಮಿಕಾ ಮಂದಣ್ಣ, ಕಾಜೊಲ್‌, ಅವರ ಡೀಪ್‌ ಫೇಕ್ ವಿಡಿಯೋ ಸಖತ್‌ ವೈರಲ್‌ ಆಗಿ ಸಂಚಲನ ಸೃಷ್ಟಿಸಿತ್ತು. ಇದೀಗ ನಟಿ ಆಲಿಯಾ ಭಟ್‌ ಅವರಿಗೂ ಕೂಡ ಡೀಪ್‌ ಫೇಕ್‌ ಸಂಕಷ್ಟ ಎದುರಾಗಿದೆ.

ಅರೆಬರೆ ಬಟ್ಟೆ ಧರಿಸಿರುವ ಯುವತಿಯ ದೇಹಕ್ಕೆ ಡೀಪ್‌ ಫೇಕ್‌ ತಂತ್ರಜ್ಙಾನ ಬಳಸಿ ನಟಿ ಆಲಿಯಾ ಭಟ್‌ ಅವರ ಮುಖವನ್ನು ಅಂಟಿಸಿ ವೈರಲ್‌ ಮಾಡಲಾಗಿದೆ.

ಡೀಪ್‌ ಫೇಕ್‌ ವಿಡಿಯೋಗಳು ವೈರಲ್‌ ಆಗುತ್ತಿದ್ದಂತೆ ಸೈಬರ್‌ ಕ್ರೈಂ ತಂಡ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೂ ಕೂಡ ಡೀಪ್‌ ಫೇಕ್‌ ಹಾವಳಿ ನಿಂತಿಲ್ಲ.

ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರು ತುಂಡುಡುಗೆ ಧರಿಸಿ ಲಿಫ್ಟ್‌ ಪ್ರವೇಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಸಲಿಗೆ ಜರಾ ಪಟೇಲ್‌ ಎಂಬ ಯುವತಿಯ ವಿಡಿಯೋಗೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಮಾರ್ಪ್‌ ಮಾಡಲಾಗಿತ್ತು. ಈ ಕುರಿತು ಪತ್ರಕರ್ತ ಅಮಿತ್‌ ಫ್ಯಾಕ್ಟ್‌ ಚೆಕ್‌ ಮಾಡಿ ಇದು ಡೀಪ್‌ ಫೇಕ್‌ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದರು.

ಇದೇ ರೀತಿ ಯುವತ್ತಿಯೊಬ್ಬರು ಬಟ್ಟೆ ಬದಲಿಸುತ್ತಿರುವ ವಿಡಿಯೋವೊಂದಕ್ಕೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ ಬಿ ಟೌನ್ ನ ಕೃಷ್ಣ ಸುಂದರಿ ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿತ್ತು.

ಅಸಲಿಗೆ ಈ ವಿಡಿಯೋವನ್ನು ಜೂನ್ 5 ರಂದು ಟಿಕ್ ಟಾಕ್ ನಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಒಬ್ಬರು, ಗೆಟ್ ರೆಡಿ ವಿತ್ ಮಿ ಟ್ರೆಂಡ್ ಅಡಿಯಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ವಿಡಿಯೋದಲ್ಲಿರುವ ಯುವತಿಯ ಮುಖಕ್ಕೆ ನಟಿ ಕಾಜೋಲ್ ಅವರ ಮುಖವನ್ನು ಜೋಡಿಸಲಾಗಿದೆ ಎಂದು ಪ್ಯಾಕ್ಟ್ ಚೆಕ್ ಮಾಡುವ ಬೂಮ್ ವರದಿ ಮಾಡಿತ್ತು.

lokesh

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

11 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

13 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

16 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

20 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

24 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

24 hours ago