ಬೆಂಗಳೂರು : ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ವಿರುದ್ಧ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-10 ಶೋನಲ್ಲಿ ತನಿಷಾ ಕುಪ್ಪಂಡ ಅವರು ಬೋವಿ ಜನಾಂಗದ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಕುಂಬಳಗೂಡು ಪೊಲೀಸರು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ, ಬೋವಿ ಜನಾಂಗದ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ತನಿಷಾ ಕುಪ್ಪಂಡ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಬಿಗ್ ಬಾಸ್ ನ ಸ್ಪರ್ಧಿ ವರ್ತೂರ್ ಸಂತೋಷ್ ಪ್ರಕರಣದ ನಂತರ ಈಗ ತನಿಷಾ ಅವರ ಹೇಳಿಕೆ ಬಗ್ಗೆ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ ?
ನವೆಂಬರ್ 8ರಂದು ಪ್ರಸಾರವಾದ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್ ಜೊತೆ ಮಾತನಾಡುವಾಗ ತನಿಷಾ ಕುಪ್ಪಂಡ ” ಏನೋ ಒಡ್ಡನ ತರ ಆಡ್ತಾ ಇದಿಯಾ” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ಆ ಸಮುದಾಯದ ಜನರ ಕೋಪಕ್ಕೆ ಕಾರಣವಾಗಿದ್ದು, ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…