ಬೆಂಗಳೂರು : ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರ ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಕಾರ್ಯಕರ್ತರು ಉಪೇಂದ್ರ ಅವರನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭೈರಪ್ಪ ಹರೀಶ್ ಕುಮಾರ್, ದಲಿತಕೇರಿ, ಊರಲ್ಲಿ ಯಾರು ಯಾರು ಇರಬೇಕು ಅಂತಾ ಹೇಳಬೇಕು. ಇವರೆಲ್ಲ ಸಿನಿಮಾಗಳಲ್ಲಿ ಮಾತ್ರ ನಾಯಕರು. ನಿಜವಾದ ನಾಯಕ ಓಡಿ ಹೋಗೋದಲ್ಲ. ಸ್ಟೇ ತರೋದು, ಓಡಿ ಹೋಗೋದಲ್ಲ. ಜಾತಿ, ಕೇರಿಗಳ ಬಗ್ಗೆ ಮಾತನಾಡುವವರನ್ನು ಬ್ಯಾನ್ ಮಾಡಬೇಕು ಎಂದು ಮಾತನಾಡಿದರು.
ದೂರು ಸ್ವೀಕರಿಸಿದ ಹಿರಿಯ ನಟ ಹಾಗೂ ಕರ್ನಾಟಕ ಫಿಲ್ಮ್ ಚೇಂಬರ್ ಗೌರವ ಕಾರ್ಯದರ್ಶಿ ಸುಂದರ್ ರಾಜ್, ನಟ ಉಪೇಂದ್ರ ಅವರು ಬೇಕಂತ ಮಾತನಾಡಿದ್ದು ಅಂತಾ ಅನಿಸುತ್ತಿಲ್ಲ. ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಫಿಲ್ಮ್ ಚೇಂಬರ್ ಗೆ ಬ್ಯಾನ್ ಮಾಡೋ ಹಕ್ಕಿಲ್ಲ. ನಾವು ಸಂಧಾನ ಮಾಡ್ತೇವೆ, ಸಂಹಾರ ಮಾಡಲ್ಲ. ಕಾರ್ಯದರ್ಶಿಯಾಗಿ ಬ್ಯಾನ್ ಮಾಡಬೇಕೆಂಬ ಮನವಿ ಸ್ವೀಕರಿಸಿದ್ದೇನೆ. ಬ್ಯಾನ್ ಮಾಡಲು ಕೋರ್ಟ್ ಅನುಮತಿ ಕೊಡಲ್ಲ. ಉಪೇಂದ್ರ ಅವರನ್ನು ಕರೆಸಿ ಮಾತನಾಡುತ್ತೇವೆ ಎಂದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…