ಬೆಂಗಳೂರು : ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರ ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಕಾರ್ಯಕರ್ತರು ಉಪೇಂದ್ರ ಅವರನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭೈರಪ್ಪ ಹರೀಶ್ ಕುಮಾರ್, ದಲಿತಕೇರಿ, ಊರಲ್ಲಿ ಯಾರು ಯಾರು ಇರಬೇಕು ಅಂತಾ ಹೇಳಬೇಕು. ಇವರೆಲ್ಲ ಸಿನಿಮಾಗಳಲ್ಲಿ ಮಾತ್ರ ನಾಯಕರು. ನಿಜವಾದ ನಾಯಕ ಓಡಿ ಹೋಗೋದಲ್ಲ. ಸ್ಟೇ ತರೋದು, ಓಡಿ ಹೋಗೋದಲ್ಲ. ಜಾತಿ, ಕೇರಿಗಳ ಬಗ್ಗೆ ಮಾತನಾಡುವವರನ್ನು ಬ್ಯಾನ್ ಮಾಡಬೇಕು ಎಂದು ಮಾತನಾಡಿದರು.
ದೂರು ಸ್ವೀಕರಿಸಿದ ಹಿರಿಯ ನಟ ಹಾಗೂ ಕರ್ನಾಟಕ ಫಿಲ್ಮ್ ಚೇಂಬರ್ ಗೌರವ ಕಾರ್ಯದರ್ಶಿ ಸುಂದರ್ ರಾಜ್, ನಟ ಉಪೇಂದ್ರ ಅವರು ಬೇಕಂತ ಮಾತನಾಡಿದ್ದು ಅಂತಾ ಅನಿಸುತ್ತಿಲ್ಲ. ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಫಿಲ್ಮ್ ಚೇಂಬರ್ ಗೆ ಬ್ಯಾನ್ ಮಾಡೋ ಹಕ್ಕಿಲ್ಲ. ನಾವು ಸಂಧಾನ ಮಾಡ್ತೇವೆ, ಸಂಹಾರ ಮಾಡಲ್ಲ. ಕಾರ್ಯದರ್ಶಿಯಾಗಿ ಬ್ಯಾನ್ ಮಾಡಬೇಕೆಂಬ ಮನವಿ ಸ್ವೀಕರಿಸಿದ್ದೇನೆ. ಬ್ಯಾನ್ ಮಾಡಲು ಕೋರ್ಟ್ ಅನುಮತಿ ಕೊಡಲ್ಲ. ಉಪೇಂದ್ರ ಅವರನ್ನು ಕರೆಸಿ ಮಾತನಾಡುತ್ತೇವೆ ಎಂದರು.
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…