ಬೆಂಗಳೂರು : ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರ ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಕಾರ್ಯಕರ್ತರು ಉಪೇಂದ್ರ ಅವರನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭೈರಪ್ಪ ಹರೀಶ್ ಕುಮಾರ್, ದಲಿತಕೇರಿ, ಊರಲ್ಲಿ ಯಾರು ಯಾರು ಇರಬೇಕು ಅಂತಾ ಹೇಳಬೇಕು. ಇವರೆಲ್ಲ ಸಿನಿಮಾಗಳಲ್ಲಿ ಮಾತ್ರ ನಾಯಕರು. ನಿಜವಾದ ನಾಯಕ ಓಡಿ ಹೋಗೋದಲ್ಲ. ಸ್ಟೇ ತರೋದು, ಓಡಿ ಹೋಗೋದಲ್ಲ. ಜಾತಿ, ಕೇರಿಗಳ ಬಗ್ಗೆ ಮಾತನಾಡುವವರನ್ನು ಬ್ಯಾನ್ ಮಾಡಬೇಕು ಎಂದು ಮಾತನಾಡಿದರು.
ದೂರು ಸ್ವೀಕರಿಸಿದ ಹಿರಿಯ ನಟ ಹಾಗೂ ಕರ್ನಾಟಕ ಫಿಲ್ಮ್ ಚೇಂಬರ್ ಗೌರವ ಕಾರ್ಯದರ್ಶಿ ಸುಂದರ್ ರಾಜ್, ನಟ ಉಪೇಂದ್ರ ಅವರು ಬೇಕಂತ ಮಾತನಾಡಿದ್ದು ಅಂತಾ ಅನಿಸುತ್ತಿಲ್ಲ. ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಫಿಲ್ಮ್ ಚೇಂಬರ್ ಗೆ ಬ್ಯಾನ್ ಮಾಡೋ ಹಕ್ಕಿಲ್ಲ. ನಾವು ಸಂಧಾನ ಮಾಡ್ತೇವೆ, ಸಂಹಾರ ಮಾಡಲ್ಲ. ಕಾರ್ಯದರ್ಶಿಯಾಗಿ ಬ್ಯಾನ್ ಮಾಡಬೇಕೆಂಬ ಮನವಿ ಸ್ವೀಕರಿಸಿದ್ದೇನೆ. ಬ್ಯಾನ್ ಮಾಡಲು ಕೋರ್ಟ್ ಅನುಮತಿ ಕೊಡಲ್ಲ. ಉಪೇಂದ್ರ ಅವರನ್ನು ಕರೆಸಿ ಮಾತನಾಡುತ್ತೇವೆ ಎಂದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…