ಚಿತ್ರ ಮಂಜರಿ

ಜಾತಿ ನಿಂದನೆ ಆರೋಪ : 5 ವರ್ಷ ಉಪೇಂದ್ರ ಅವರನ್ನು ಬ್ಯಾನ್ ಮಾಡುವಂತೆ ಕರ್ನಾಟಕ ರಣಧೀರ ಪಡೆ ಮನವಿ

ಬೆಂಗಳೂರು : ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರ ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಕಾರ್ಯಕರ್ತರು ಉಪೇಂದ್ರ ಅವರನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭೈರಪ್ಪ ಹರೀಶ್ ಕುಮಾರ್, ದಲಿತಕೇರಿ, ಊರಲ್ಲಿ ಯಾರು ಯಾರು ಇರಬೇಕು ಅಂತಾ ಹೇಳಬೇಕು. ಇವರೆಲ್ಲ ಸಿನಿಮಾಗಳಲ್ಲಿ ಮಾತ್ರ ನಾಯಕರು. ನಿಜವಾದ ನಾಯಕ ಓಡಿ ಹೋಗೋದಲ್ಲ. ಸ್ಟೇ ತರೋದು, ಓಡಿ ಹೋಗೋದಲ್ಲ. ಜಾತಿ, ಕೇರಿಗಳ ಬಗ್ಗೆ ಮಾತನಾಡುವವರನ್ನು ಬ್ಯಾನ್ ಮಾಡಬೇಕು ಎಂದು ಮಾತನಾಡಿದರು.

ದೂರು ಸ್ವೀಕರಿಸಿದ ಹಿರಿಯ ನಟ ಹಾಗೂ ಕರ್ನಾಟಕ ಫಿಲ್ಮ್ ಚೇಂಬರ್ ಗೌರವ ಕಾರ್ಯದರ್ಶಿ ಸುಂದರ್ ರಾಜ್, ನಟ ಉಪೇಂದ್ರ ಅವರು ಬೇಕಂತ ಮಾತನಾಡಿದ್ದು ಅಂತಾ ಅನಿಸುತ್ತಿಲ್ಲ. ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಫಿಲ್ಮ್ ಚೇಂಬರ್ ಗೆ ಬ್ಯಾನ್ ಮಾಡೋ ಹಕ್ಕಿಲ್ಲ. ನಾವು ಸಂಧಾನ ಮಾಡ್ತೇವೆ, ಸಂಹಾರ ಮಾಡಲ್ಲ. ಕಾರ್ಯದರ್ಶಿಯಾಗಿ ಬ್ಯಾನ್ ಮಾಡಬೇಕೆಂಬ ಮನವಿ ಸ್ವೀಕರಿಸಿದ್ದೇನೆ. ಬ್ಯಾನ್ ಮಾಡಲು ಕೋರ್ಟ್ ಅನುಮತಿ ಕೊಡಲ್ಲ. ಉಪೇಂದ್ರ ಅವರನ್ನು ಕರೆಸಿ ಮಾತನಾಡುತ್ತೇವೆ ಎಂದರು.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago