ಗಿರೀಶ್ ಕಾಸರವಳ್ಳಿ, ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ನಿರ್ದೇಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ನಿರ್ದೇಶನದ ‘ಅಮರ ಪ್ರೇಮಿ ಅರುಣ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಡಾ.ಮಂಜಮ್ಮ ಜೋಗತಿ ಹಾಗೂ ಡಿ ಬೀಟ್ಸ್ ಸಂಸ್ಥೆಯ ಶೈಲಜಾ ನಾಗ್ ಇಬ್ಬರೂ ಜೊತೆಗೂಡಿ ಚಿತ್ರದ ಮೊದಲ ನೋಟ ಹಾಗೂ ಟೀಸರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದ್ದಾರೆ. ಒಲವು ಸಿನಿಮಾಸ್ ಬ್ಯಾನರ್ ಅಡಿ ಸಮಾನ ಮನಸ್ಕರು ಸೇರಿ ನಿರ್ಮಿಸಿರುವ ಈ ಚಿತ್ರದಲ್ಲಿ ಮಂಜಮ್ಮ ಜೋಗತಿ ವಿಶೇಷ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.
‘ಅಮರ ಪ್ರೇಮಿ ಅರುಣ್’ ಬಳ್ಳಾರಿಯಲ್ಲಿ ನಡೆಯುವ ಪ್ರೇಮ ಕಥೆ. ಬಳ್ಳಾರಿ ಹಾಗೂ ಸುತ್ತ ಮುತ್ತಲಿನಲ್ಲೇ ಚಿತ್ರಕ್ಕೆ ೫೪ ದಿನಗಳ ಚಿತ್ರೀಕರಣ ನಡೆದಿದೆ. ಸಂಭಾಷಣೆ ಕೂಡ ಬಳ್ಳಾರಿ ಭಾಷೆಯಲ್ಲೇ ಇರುತ್ತದೆ. ನಾಯಕ ಹರಿ ಶವಾರ್ ಅರುಣ್ ಎಂಬ ಪಾತ್ರದಲ್ಲಿ ಹಾಗೂ ನಾಯಕಿ ದೀಪಿಕಾ ಆರಾಧ್ಯ ಕಾವ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಧರ್ಮಣ್ಣ ಕಡೂರು ಅವರದು ಬಳ್ಳಾರಿ ಸೀನ ಎಂಬ ಪಾತ್ರ. ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಪ್ರವೀಣ್ ಕುಮಾರ್, ‘ಇದೊಂದು ಕೌಟುಂಬಿಕ ಚಿತ್ರವೂ ಹೌದು. ನಾಯಕ ಹಾಗೂ ನಾಯಕಿಗೆ ಅಪ್ಪ, ಅಮ್ಮ, ಅಜ್ಜಿ ಎಲ್ಲರೂ ಇರುತ್ತಾರೆ. ಈ ಪಾತ್ರಗಳಿಗೆ ಹಿರಿಯ ಕಲಾವಿದರು ಜೀವ ತುಂಬಿದ್ದಾರೆ. ಪ್ರವೀಣ್ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಏಪ್ರಿಲ್ನಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದು ತಿಳಿಸಿದರು. ನಾಯಕ ನಟ ಹರಿ ಶವಾರ್ ಮಾತನಾಡಿ, ‘ಕಹಿ’ ಸಿನಿಮಾದಲ್ಲಿ ಅಭಿನಯಿಸಿದ್ದ ನಾನು ಈ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿದ್ದೇನೆ ಎಂದರು. ಚಿತ್ರದಲ್ಲಿ ಆರು ಹಾಡುಗಳಿವೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರವೀಣ್ಕುಮಾರ್ ಹಾಡುಗಳನ್ನು ಬರೆದಿದ್ದಾರೆ
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…