ಗಿರೀಶ್ ಕಾಸರವಳ್ಳಿ, ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ನಿರ್ದೇಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ನಿರ್ದೇಶನದ ‘ಅಮರ ಪ್ರೇಮಿ ಅರುಣ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಡಾ.ಮಂಜಮ್ಮ ಜೋಗತಿ ಹಾಗೂ ಡಿ ಬೀಟ್ಸ್ ಸಂಸ್ಥೆಯ ಶೈಲಜಾ ನಾಗ್ ಇಬ್ಬರೂ ಜೊತೆಗೂಡಿ ಚಿತ್ರದ ಮೊದಲ ನೋಟ ಹಾಗೂ ಟೀಸರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದ್ದಾರೆ. ಒಲವು ಸಿನಿಮಾಸ್ ಬ್ಯಾನರ್ ಅಡಿ ಸಮಾನ ಮನಸ್ಕರು ಸೇರಿ ನಿರ್ಮಿಸಿರುವ ಈ ಚಿತ್ರದಲ್ಲಿ ಮಂಜಮ್ಮ ಜೋಗತಿ ವಿಶೇಷ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.
‘ಅಮರ ಪ್ರೇಮಿ ಅರುಣ್’ ಬಳ್ಳಾರಿಯಲ್ಲಿ ನಡೆಯುವ ಪ್ರೇಮ ಕಥೆ. ಬಳ್ಳಾರಿ ಹಾಗೂ ಸುತ್ತ ಮುತ್ತಲಿನಲ್ಲೇ ಚಿತ್ರಕ್ಕೆ ೫೪ ದಿನಗಳ ಚಿತ್ರೀಕರಣ ನಡೆದಿದೆ. ಸಂಭಾಷಣೆ ಕೂಡ ಬಳ್ಳಾರಿ ಭಾಷೆಯಲ್ಲೇ ಇರುತ್ತದೆ. ನಾಯಕ ಹರಿ ಶವಾರ್ ಅರುಣ್ ಎಂಬ ಪಾತ್ರದಲ್ಲಿ ಹಾಗೂ ನಾಯಕಿ ದೀಪಿಕಾ ಆರಾಧ್ಯ ಕಾವ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಧರ್ಮಣ್ಣ ಕಡೂರು ಅವರದು ಬಳ್ಳಾರಿ ಸೀನ ಎಂಬ ಪಾತ್ರ. ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಪ್ರವೀಣ್ ಕುಮಾರ್, ‘ಇದೊಂದು ಕೌಟುಂಬಿಕ ಚಿತ್ರವೂ ಹೌದು. ನಾಯಕ ಹಾಗೂ ನಾಯಕಿಗೆ ಅಪ್ಪ, ಅಮ್ಮ, ಅಜ್ಜಿ ಎಲ್ಲರೂ ಇರುತ್ತಾರೆ. ಈ ಪಾತ್ರಗಳಿಗೆ ಹಿರಿಯ ಕಲಾವಿದರು ಜೀವ ತುಂಬಿದ್ದಾರೆ. ಪ್ರವೀಣ್ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಏಪ್ರಿಲ್ನಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದು ತಿಳಿಸಿದರು. ನಾಯಕ ನಟ ಹರಿ ಶವಾರ್ ಮಾತನಾಡಿ, ‘ಕಹಿ’ ಸಿನಿಮಾದಲ್ಲಿ ಅಭಿನಯಿಸಿದ್ದ ನಾನು ಈ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿದ್ದೇನೆ ಎಂದರು. ಚಿತ್ರದಲ್ಲಿ ಆರು ಹಾಡುಗಳಿವೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರವೀಣ್ಕುಮಾರ್ ಹಾಡುಗಳನ್ನು ಬರೆದಿದ್ದಾರೆ
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…