ಚಿತ್ರ ಮಂಜರಿ

ಪ್ರಿಯಕರನೊಟ್ಟಿಗೆ ನಿಶ್ಚಿತಾರ್ಥ ಮಾಡಿಕೊಂಡಿ ಅಮೀರ್​ ಖಾನ್​ ಪುತ್ರಿ

ಮುಂಬೈ: ಬಾಲಿವುಡ್​ನ ಸ್ಟಾರ್​ ನಟ ಅಮೀರ್​ ಖಾನ್​ ಅವರ ಪುತ್ರಿ ಐರಾ ಖಾನ್​ ಅವರು ಪ್ರಿಯಕರ ನುಪೂರ್​ ಶಿಖರೆ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಕುರಿತು ಜೋಡಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಐರಾ ಮತ್ತು ನುಪೂರ್ ಶಿಖರೆ ಕಳೆದ ಎರಡು ವರ್ಷಗಳಿಂದ ಡೇಟಿಂಗ್​ ನಡೆಸುತ್ತಿದ್ದು, ಇಂದು ಇನ್​ಸ್ಟಾಗ್ರಾಮ್​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ನುಪೂರ್​ ಶಿಖರೆ ಪ್ರಪೋಸ್​ ಮಾಡುತ್ತಿರುವ ವಿಡಿಯೋ ತುಣುಕಿನ ಪೋಸ್ಟ್ ಅ​ನ್ನು ಐರಾ ಹಂಚಿಕೊಂಡಿದ್ದಾರೆ.
ಸೈಕಲಿಂಗ್​ ಕಾರ್ಯಕ್ರಮದಲ್ಲಿ ಪ್ರಿಯಕರ ನುಪೂರ್​ ಶಿಖರೆ ಸಿನಿಮಾ ಶೈಲಿಯಲ್ಲಿ ಐರಾ ಅವರಿಗೆ ಉಂಗುರ ನೀಡಿ, ನೀನು ನನ್ನ ಮದುವೆ ಆಗುವೆಯಾ ಎಂದು ಪ್ರಸ್ತಾಪಿಸಿದಾಗ ಐರಾ ಹೌದು ಎಂದು ಶಿಖರೆಗೆ ಚುಂಬಿಸಿ ಒಪ್ಪಿಗೆ ನೀಡುತ್ತಿರುವ ವಿಡಿಯೋ ತುಣುಕನ್ನು ಐರಾ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪೋಸ್ಟ್​ಗೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದವರು ಮೆಚ್ಚುಗೆ ವ್ಯಕ್ತಪಡಿಸಿ ಜೋಡಿಗಳಿಗೆ ಶುಭಹಾರೈಸಿದ್ದಾರೆ. ನಟ ಅಮೀರ್​ ಖಾನ್​ ಐರಾ ಮತ್ತು ಮೊದಲ ಪತ್ನಿ ರೀನಾ ಜೊತೆಗಿರುವ ಪೋಸ್ಟ್ ಹಂಚಿಕೊಂಡಿದ್ದಾರೆ. ಇನ್ನು ಮೊದಲ ಪತ್ನಿಯ ಮಗಳೇ ಐರಾ ಆಗಿದ್ದು, 2002 ರಲ್ಲಿ ಅಮೀರ್​ ಖಾನ್​ ರೀನಾ ದಂಪತಿ ವಿಚ್ಚೇದನ ಪಡೆದುಕೊಂಡಿದ್ದಾರೆ.

andolanait

Recent Posts

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

8 mins ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

46 mins ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

2 hours ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

2 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

3 hours ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

5 hours ago