ಚಿತ್ರ ಮಂಜರಿ

ಎಸ್‌.ನಾರಾಯಣ್‌ ನಿರ್ದೇಶನದಲ್ಲಿ ಮತ್ತೆ ತೆರೆಮೇಲೆ ಬರಲಿದ್ದಾರೆ ಅನಿರುಧ್‌…

ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ನಟ ಅನಿರುದ್ಧ್ ಮತ್ತು ಖ್ಯಾತ ನಿರ್ದೇಶಕ ಎಸ್‌.ನಾರಾಯಣ್‌ ಹೊಸ ಧಾರಾವಾಹಿ ‘ ಸೂರ್ಯವಂಶ’ಕ್ಕೆ ಒಂದಾಗಿದ್ದಾರೆ. ಇಬ್ಬರೂ ಡೆಡ್ಲಿ ಕಾಂಬಿನೇಷನ್‌ ಎಂದೇಳುತ್ತಿರುವ ನೆಟ್ಟಿಗರು ನಿರೀಕ್ಷೆ ಹೆಚ್ಚಿಗೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಈ ವಿಷಯವನ್ನು ಅನಿರುಧ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್ ನಾರಾಯಣ್ ಸರ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾ ಇದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ. ತಮ್ಮ ಪ್ರೀತಿ, ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತದೆ ಅನ್ನೋ ಭರವಸೆ ನನಗಿದೆ’ ಎಂದು ಅನಿರುದ್ಧ ಬರೆದುಕೊಂಡಿದ್ದಾರೆ.

ನೇರಳೆ ಬಣ್ಣದ ಸೂಟ್‌ನಲ್ಲಿ ಅನಿರುದ್ಧ್ ಕಾಣಿಸಿಕೊಂಡರೆ, ವೈಟ್ ಆಂಡ್ ವೈಟ್ ಪಂಚೆಯಲ್ಲಿ ಎಸ್‌ ನಾರಾಯಣ್ ಕಾಣಿಸಿಕೊಂಡಿದ್ದಾರೆ. ಎರಡು ಡೆಡ್ಲಿ ಕಾಂಬಿನೇಷನ್‌ ಡಿಫರೆಂಟ್‌ ಲುಕ್‌ಗಳು ಕಥೆ ಏನೆಂದು ಗೆಸ್‌ ಮಾಡುವುದರಲ್ಲಿ ಅಭಿಮಾನಿಗಳು ಬ್ಯುಸಿಯಾಗಿದ್ದಾರೆ.

 

andolana

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

11 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

11 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

11 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

11 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

12 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

12 hours ago