ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ನಟ ಅನಿರುದ್ಧ್ ಮತ್ತು ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಹೊಸ ಧಾರಾವಾಹಿ ‘ ಸೂರ್ಯವಂಶ’ಕ್ಕೆ ಒಂದಾಗಿದ್ದಾರೆ. ಇಬ್ಬರೂ ಡೆಡ್ಲಿ ಕಾಂಬಿನೇಷನ್ ಎಂದೇಳುತ್ತಿರುವ ನೆಟ್ಟಿಗರು ನಿರೀಕ್ಷೆ ಹೆಚ್ಚಿಗೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಈ ವಿಷಯವನ್ನು ಅನಿರುಧ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
‘ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್ ನಾರಾಯಣ್ ಸರ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾ ಇದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ. ತಮ್ಮ ಪ್ರೀತಿ, ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತದೆ ಅನ್ನೋ ಭರವಸೆ ನನಗಿದೆ’ ಎಂದು ಅನಿರುದ್ಧ ಬರೆದುಕೊಂಡಿದ್ದಾರೆ.
ನೇರಳೆ ಬಣ್ಣದ ಸೂಟ್ನಲ್ಲಿ ಅನಿರುದ್ಧ್ ಕಾಣಿಸಿಕೊಂಡರೆ, ವೈಟ್ ಆಂಡ್ ವೈಟ್ ಪಂಚೆಯಲ್ಲಿ ಎಸ್ ನಾರಾಯಣ್ ಕಾಣಿಸಿಕೊಂಡಿದ್ದಾರೆ. ಎರಡು ಡೆಡ್ಲಿ ಕಾಂಬಿನೇಷನ್ ಡಿಫರೆಂಟ್ ಲುಕ್ಗಳು ಕಥೆ ಏನೆಂದು ಗೆಸ್ ಮಾಡುವುದರಲ್ಲಿ ಅಭಿಮಾನಿಗಳು ಬ್ಯುಸಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…